alex Certify ಮದುವೆಗೆ ಒಪ್ಪುವುದಿಲ್ಲವೆಂದು ಮರಕ್ಕೆ ನೇಣು ಹಾಕಿಕೊಂಡು ಸಾವಿಗೆ ಶರಣಾದ ಯುವಪ್ರೇಮಿಗಳು..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮದುವೆಗೆ ಒಪ್ಪುವುದಿಲ್ಲವೆಂದು ಮರಕ್ಕೆ ನೇಣು ಹಾಕಿಕೊಂಡು ಸಾವಿಗೆ ಶರಣಾದ ಯುವಪ್ರೇಮಿಗಳು..!

ತೆಲಂಗಾಣದ ಯುವ ಪ್ರೇಮಿಗಳಿಬ್ಬರು ತಮ್ಮ ಕುಟುಂಬಕ್ಕೆ ಹೆದರಿ ಪ್ರಾಣವನ್ನೆ ಕಳೆದುಕೊಂಡಿದ್ದಾರೆ. ಸೋಮವಾರ ತೆಲಂಗಾಣದ ಸಂಗಾರೆಡ್ಡಿ ಪಟ್ಟಣದಲ್ಲಿ ಇಬ್ಬರು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಬ್ಬರ ಕುಟುಂಬಸ್ಥರು ತಮ್ಮ ಪ್ರೀತಿಯನ್ನು ಒಪ್ಪಿಕೊಳ್ಳುವುದಿಲ್ಲ ಎಂಬ ಭಯದಿಂದ ಅವರು ಸಾಯುವ ನಿರ್ಧಾರ ಮಾಡಿದ್ದಾರೆ

ಮೃತರನ್ನು ವಿಕಾರಾಬಾದ್ ಜಿಲ್ಲೆಯ 22 ವರ್ಷದ ಬೈಗರಿ ಶಿವ ಮತ್ತು ಸಂಗಾರೆಡ್ಡಿಯ 20 ವರ್ಷದ ಬೊಗ್ಗುಲ ಅಮೃತ ಎಂದು ಗುರುತಿಸಲಾಗಿದೆ. ಸಂಗಾರೆಡ್ಡಿಯ ಮುನಿಪಲ್ಲಿ ಮಂಡಲದ ಬುಧೇರಾ ಗ್ರಾಮದ ಹೊರವಲಯದಲ್ಲಿ ಪ್ರೇಮಿಗಳ ಜೋಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹಗಳು ಪತ್ತೆಯಾಗಿದ್ದು, ಸ್ಥಳದಲ್ಲೆ ಆತ್ಮಹತ್ಯೆ ಪತ್ರವು ದೊರಕಿದೆ. ಡೆತ್ ನೋಟ್ ನಲ್ಲಿ ನಾವಿಬ್ಬರು ಪ್ರೀತಿ ಮಾಡಿದ್ದೆ ತಪ್ಪು. ಇನ್ನೊಬ್ಬರನ್ನ ಮದುವೆಯಾಗಲು ನಮಗೆ ಇಷ್ಟವಿಲ್ಲ. ನಮ್ಮ ಮದುವೆಗೆ ಮನೆಯವರು ಒಪ್ಪುವುದಿಲ್ಲ ಹಾಗಾಗಿ ಆತ್ಮಹತ್ಯೆ ಮಾಡಿಕೊಳ್ಳತ್ತಿದ್ದೇವೆ ಎಂದು ತಮ್ಮ ಸಾವಿಗೆ ಕಾರಣ ತಿಳಿಸಿದ್ದಾರೆ.

ಮೃತ ಶಿವ ಖಾಸಗಿ ಕಾಲೇಜಿನಲ್ಲಿ ಫಾರ್ಮಸಿ ಪದವಿ ವ್ಯಾಸಂಗ ಮಾಡುತ್ತಿದ್ದ. ಅಮೃತ ಲ್ಯಾಬ್ ಟೆಕ್ನಿಷಿಯನ್ ಕೋರ್ಸ್ ಓದುತ್ತಿದ್ದಳು. ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಸಿಆರ್‌ಪಿಸಿ ಸೆಕ್ಷನ್ 174 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...