alex Certify ರಾಜ್ಯದ ರೈತರಿಗೆ ಸಿಎಂ ಬಸವರಾಜ ಬೊಮ್ಮಾಯಿ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ರೈತರಿಗೆ ಸಿಎಂ ಬಸವರಾಜ ಬೊಮ್ಮಾಯಿ ಗುಡ್ ನ್ಯೂಸ್

ನವದೆಹಲಿ: ರಾಜ್ಯಕ್ಕೆ ಯೂರಿಯಾ ಮತ್ತು ಡಿಎಪಿ ಕೊರತೆಯಾಗುವುದಿಲ್ಲ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಮನ್ಸುಖ್ ಮಾಂಡವಿಯ ಅವರು ಆಶ್ವಾಸನೆ ನೀಡಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ನವದೆಹಲಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಮನ್ಸುಖ್ ಮಾಂಡವೀಯ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಬೇಕಿರುವ ರಸಗೊಬ್ಬರದ ಬಗ್ಗೆ ಚರ್ಚೆ ಮಾಡಲಾಯಿತು. ನಮಗೆ ಮುಂಗಾರಿನಲ್ಲಿ ಡಿಎಪಿ ಮತ್ತು ಯೂರಿಯಾ ಅಗತ್ಯವೂ ಇದೆ ಎಂದು ತಿಳಿಸಲಾಗಿದೆ ಎಂದರು.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅಮೋನಿಯಾ ಮತ್ತು ಇತರೆ ಗೊಬ್ಬರದ ಕೊರತೆಯಿಂದ ಡಿಎಪಿ ಬಗ್ಗೆ ಅನುಮಾನವಿತ್ತು. ಡಿಎಪಿ ಗೊಬ್ಬರ ಸಿಗಲಿದೆ ಎಂದು ಹೇಳಿದ್ದಾರೆ. ಮಂಗಳೂರು ಮತ್ತು ಕಾರವಾರ ಬಂದರಿಗೆ ಬಂದ ಮೇಲೆ ಸಾಗಾಣಿಕೆ ವ್ಯವಸ್ಥೆಯಾಗಬೇಕು ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...