alex Certify ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಹಬ್ಬಕ್ಕೆ ಊರಿಗೆ ತೆರಳುವವರಿಗೆ ಹೆಚ್ಚುವರಿ ಬಸ್ ಸೌಲಭ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಹಬ್ಬಕ್ಕೆ ಊರಿಗೆ ತೆರಳುವವರಿಗೆ ಹೆಚ್ಚುವರಿ ಬಸ್ ಸೌಲಭ್ಯ

 ಬೆಂಗಳೂರು: ಹಬ್ಬಕ್ಕೆ ಊರಿಗೆ ಹೊರಟ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್ ಇಲ್ಲಿದೆ. ಗೌರಿ -ಗಣೇಶ ಹಬ್ಬದ ಪ್ರಯುಕ್ತ 1000 ಕ್ಕೂ ಅಧಿಕ ಬಸ್ ಸಂಚಾರಕ್ಕೆ ಕೆಎಸ್ಆರ್ಟಿಸಿ ವ್ಯವಸ್ಥೆ ಮಾಡಿದೆ.

ಸೆಪ್ಟೆಂಬರ್ 8, 9 ರಂದು ಬೆಂಗಳೂರಿನಿಂದ ರಾಜ್ಯ ಹಾಗೂ ಹೊರ ರಾಜ್ಯದ ವಿವಿಧ ಸ್ಥಳಗಳಿಗೆ ಬಸ್ ಗಳು ಸಂಚರಿಸಲಿವೆ.

ಮೆಜೆಸ್ಟಿಕ್ ನಿಲ್ದಾಣದಿಂದ ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ, ಹೊರನಾಡು, ಶೃಂಗೇರಿ, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ವಿಜಯಪುರ ಕಾರವಾರ, ಕಲಬುರ್ಗಿ, ಬಳ್ಳಾರಿ ಮೊದಲಾದ ಸ್ಥಳಗಳಿಗೆ ಬಸ್ ಗಳು ಸಂಚರಿಸಲಿವೆ. ಮೈಸೂರು ರಸ್ತೆಯ ಸ್ಯಾಟಲೈಟ್ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ಕುಶಾಲನಗರ, ಮಡಿಕೇರಿ ಕಡೆಗೆ ಬಸ್ ತೆರಳಿವೆ. ಅದೇ ರೀತಿ ಶಾಂತಿನಗರ ಬಸ್ ನಿಲ್ದಾಣದಿಂದಲೂ ಬಸ್ ಗಳು ಸಂಚಾರ ಆರಂಭಿಸಲಿವೆ.

ksrtc.karnataka.gov.in ಜಾಲತಾಣದ ಮೂಲಕ ಟಿಕೆಟ್ ಕಾಯ್ದಿರಿಸಬಹುದಾಗಿದೆ. ಸೆಪ್ಟಂಬರ್ 12 ರಂದು ರಾಜ್ಯ ಮತ್ತು ಹೊರ ರಾಜ್ಯಗಳಿಂದ ಬೆಂಗಳೂರಿಗೆ ಬಸ್ ವ್ಯವಸ್ತೆ ಇರಲಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...