alex Certify BIG NEWS: ಕೇಂದ್ರ ಹಣಕಾಸು ಸಚಿವರ ಆಪ್ತ ಕಾರ್ಯದರ್ಶಿಯಾಗಿ ಬಳ್ಳಾರಿ ಜಿಲ್ಲಾಧಿಕಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೇಂದ್ರ ಹಣಕಾಸು ಸಚಿವರ ಆಪ್ತ ಕಾರ್ಯದರ್ಶಿಯಾಗಿ ಬಳ್ಳಾರಿ ಜಿಲ್ಲಾಧಿಕಾರಿ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಆಪ್ತ ಕಾರ್ಯದರ್ಶಿಯಾಗಿ ಬಳ್ಳಾರಿ ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಅವರನ್ನು ನಿಯೋಜಿಸಲಾಗಿದೆ.

ಕೇಂದ್ರ ಮಾನವ ಸಂಪನ್ಮೂಲ ಮತ್ತು ತರಬೇತಿ ಇಲಾಖೆಯಿಂದ ರಾಜ್ಯಸರ್ಕಾರಕ್ಕೆ ಈ ಕುರಿತಾಗಿ ಪತ್ರ ಬರೆದು ಕೂಡಲೇ ಬಳ್ಳಾರಿ ಜಿಲ್ಲಾಧಿಕಾರಿ ನಕುಲ್ ಅವರನ್ನು ಕೇಂದ್ರ ಸೇವೆಗೆ ಕಳುಹಿಸುವಂತೆ ತಿಳಿಸಲಾಗಿದೆ ಎನ್ನಲಾಗಿದೆ.

2019 ರ ಜೂನ್ 19 ರಂದು ಬಳ್ಳಾರಿ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದ ಅವರು ಈ ಮೊದಲು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಪತ್ನಿಯನ್ನು ಹೆರಿಗೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಸರಳತೆ ಮೆರೆದಿದ್ದರು. ತಮ್ಮ ಕಾರ್ಯಚಟುವಟಿಕೆಗಳ ಮೂಲಕ ಗಮನಸೆಳೆದಿದ್ದ ಅವರನ್ನು ಕೇಂದ್ರ ಸೇವೆಗೆ ಕರೆಸಿಕೊಳ್ಳಲಾಗುತ್ತದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...