alex Certify ರಾಜ್ಯ ಸರ್ಕಾರ ಪತನಕ್ಕೆ ಒಂದು ಸಾವಿರ ಕೋಟಿ ರೂ. ಹೇಳಿಕೆ: ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಎಫ್ಐಆರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯ ಸರ್ಕಾರ ಪತನಕ್ಕೆ ಒಂದು ಸಾವಿರ ಕೋಟಿ ರೂ. ಹೇಳಿಕೆ: ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಎಫ್ಐಆರ್

ದಾವಣಗೆರೆ: ರಾಜ್ಯ ಸರ್ಕಾರ ಪತನಕ್ಕೆ ನಾಯಕರೊಬ್ಬರು 1000 ಕೋಟಿ ರೂಪಾಯಿ ತೆಗೆದಿರಿಸಿದ್ದಾರೆ ಎಂದು ಆರೋಪಿಸಿದ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದಾವಣಗೆರೆಯ ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ದಾವಣಗೆರೆಯ ಗಾಂಧಿನಗರ ಠಾಣೆಗೆ ವರ್ಗಾವಣೆಗೊಂಡಿದೆ.

ಕಾಂಗ್ರೆಸ್ ಗೆ 135 ಸ್ಥಾನಗಳನ್ನು ನೀಡಿದ ರಾಜ್ಯದ ಮತದಾರರು 5 ವರ್ಷ ಸುಭದ್ರ ಆಡಳಿತ ನಡೆಸಲು ಜನಾದೇಶ ನೀಡಿದ್ದಾರೆ. ಅಧಿಕಾರವಿಲ್ಲದೆ ಹತಾಶರಾದ ಬಿಜೆಪಿಯ ಕೆಲವು ನಾಯಕರು ಸರ್ಕಾರ ಪತನಗೊಳಿಸಲು ಸಂಚು ರೂಪಿಸಿರುವುದು ಯತ್ನಾಳ್ ಅವರ ಹೇಳಿಕೆಯಿಂದ ಸ್ಪಷ್ಟವಾಗಿದೆ. ಅಕ್ರಮ ಹಣ ವರ್ಗಾವಣೆ ನಡೆಯುತ್ತಿದ್ದು, ಇಂತಹ ಹೇಳಿಕೆ ನೀಡಿದ ಯತ್ನಾಳ್ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ದೂರು ನೀಡಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...