alex Certify ತನಿಖಾಧಿಕಾರಿಗೆ ಜೀವ ಬೆದರಿಕೆ; ನಟ ದಿಲೀಪ್ ಗೆ ಸಂಕಷ್ಟ ಶುರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತನಿಖಾಧಿಕಾರಿಗೆ ಜೀವ ಬೆದರಿಕೆ; ನಟ ದಿಲೀಪ್ ಗೆ ಸಂಕಷ್ಟ ಶುರು

2017ರ ಮಲಯಾಳಂ ನಟಿ ಅಪಹರಣ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಕೇರಳ ಪೊಲೀಸರ ಅಪರಾಧ ವಿಭಾಗವು ಮಲಯಾಳಂ ನಟ ದಿಲೀಪ್ ಮತ್ತು ಇತರ ಐವರ ವಿರುದ್ಧ ಹೊಸ ಪ್ರಕರಣವನ್ನು ದಾಖಲಿಸಿದ್ದಾರೆ.

ನಟ ದಿಲೀಪ್ ಮತ್ತು ಆತನ ಕಡೆಯವರು ಈ ಪ್ರಕರಣದ ತನಿಖೆ ಮಾಡುತ್ತಿದ್ದ ಅಧಿಕಾರಿಗಳಿಗೆ ಬೆದರಿಕೆ ಹಾಕಿದ್ದಾರೆ ಎಂದು ವರದಿಯಾಗಿದೆ. ನಟಿಯ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ದೇಶಕ ಬಾಲಚಂದ್ರ ಕುಮಾರ್ ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ ಬೆನ್ನಲ್ಲೇ ಪೊಲೀಸರು ಈ ನಿರ್ಧಾರ ತೆಗೆದುಕೊಂಡಿದ್ದಾರೆ.

ಇತ್ತೀಚೆಗೆ, ನಿರ್ದೇಶಕ ಬಾಲಚಂದ್ರ ಕುಮಾರ್ ಅವರು 2017 ರ ನಟಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ಆಘಾತಕಾರಿ ವಿಷಯಗಳನ್ನ ಬಹಿರಂಗಪಡಿಸಿದರು. ಬಾಲಚಂದ್ರ ಕುಮಾರ್ ಹೇಳಿಕೆಯ ಪ್ರಕಾರ, ದಿಲೀಪ್ ಮತ್ತು ಅವರ ಕಡೆಯ ವ್ಯಕ್ತಿಗಳು ತನಿಖಾಧಿಕಾರಿಯ ಜೀವಕ್ಕೆ ಅಪಾಯ ಉಂಟುಮಾಡಲು ಪ್ರಯತ್ನಿಸಿದ್ದರು. ಅವರು ಈ ಹೇಳಿಕೆ ನೀಡಿದ ನಂತರ, ಹಲವಾರು ಆಡಿಯೋ ತುಣುಕುಗಳು ಹೊರಬಂದವು. ಈ ಆಡಿಯೋಗಳನ್ನ ಆಧಾರವಾಗಿಟ್ಟಕೊಂಡು, ಪಿತೂರಿ ನಡೆಸಿ, ಬೆದರಿಕೆ ಹಾಕಿದ್ದಕ್ಕಾಗಿ ದಿಲೀಪ್ ಮತ್ತು ಐವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಮಲಯಾಳಂ ನಟ ದಿಲೀಪ್ ಈ ಪ್ರಕರಣದ ಎ1, ಅಂದರೆ ಮೊದಲ ಆರೋಪಿಯಾಗಿದ್ದಾರೆ. ಅವರ ಸಹೋದರ ಅನೂಪ್ ಎ2, ಸೋದರ ಮಾವ ಎ3 ಆರೋಪಿಗಳಾಗಿದ್ದಾರೆ. ಎಫ್‌ಐಆರ್‌ನಲ್ಲಿ ಬಾಬು ಚೆಮಾಂಗನಾಡ್, ಅಪ್ಪು ಮತ್ತು ಅಪರಿಚಿತ ವ್ಯಕ್ತಿಯೊಬ್ಬನನ್ನು ಹೆಸರಿಸಲಾಗಿದೆ.

2017ರಲ್ಲಿ ಮಲಯಾಳಂನ ಜನಪ್ರಿಯ ನಟಿಯೊಬ್ಬರನ್ನ, ಚಲಿಸುತ್ತಿದ್ದ ಕಾರಿನಲ್ಲಿ ಅಪಹರಿಸಿ ಹಲ್ಲೆ ನಡೆಸಿದ ಘಟನೆ ಬೆಳಕಿಗೆ ಬಂದಾಗ ಇಡೀ ದೇಶವೇ ಬೆಚ್ಚಿಬಿದ್ದಿತ್ತು. ಮಲಯಾಳಂ ನಟ ದಿಲೀಪ್ ಪ್ರಕರಣದ ಆರೋಪಿಗಳಲ್ಲಿ ಒಬ್ಬರಾಗಿದ್ದು, ಹಲವು ವಾರಗಳ ಕಾಲ ನ್ಯಾಯಾಂಗ ಬಂಧನದಲ್ಲಿದ್ದರು. ಐದು ವರ್ಷಗಳಿಂದ ಪ್ರಕರಣ ನಡೆಯುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ, ಜನವರಿ 5 ರಂದು ಕೇರಳ ಸರ್ಕಾರವು ಆರು ತಿಂಗಳ ಕಾಲ ವಿಸ್ತರಣೆ ಕೋರಿ ಸುಪ್ರೀಂ ಕೋರ್ಟ್‌ ಮೊರೆ ಹೋಗಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...