alex Certify ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಮಸೀದಿ ಬಾಗಿಲಿಗೆ ಆರತಿ ಬೆಳಗಿ ಜೈ ಶ್ರೀರಾಮ್ ಘೋಷಣೆ ಕೂಗಿದವರ ವಿರುದ್ಧ ಎಫ್ಐಆರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಮಸೀದಿ ಬಾಗಿಲಿಗೆ ಆರತಿ ಬೆಳಗಿ ಜೈ ಶ್ರೀರಾಮ್ ಘೋಷಣೆ ಕೂಗಿದವರ ವಿರುದ್ಧ ಎಫ್ಐಆರ್

ಕೊಪ್ಪಳ: ಗಂಗಾವತಿಯ ಹಿಂದೂ ಮಹಾ ಮಂಡಳಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಜಾಮಿಯಾ ಮಸೀದಿ ಬಾಗಿಲಿಗೆ ಆರತಿ ಬೆಳಗಿ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ ಐವರ ವಿರುದ್ಧ ಗಂಗಾವತಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

ಯಮನೂರ ರಾಥೋಡ್, ರೌಡಿ ಶೀಟರ್ ಗಳಾದ ಶ್ರೀಕಾಂತ್ ಹೊಸಕೇರಿ, ಕುಮಾರ, ಚನ್ನಬಸವ, ಸಂಗಮೇಶ ಅವರ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದೂರು ದಾಖಲಿಸಿಕೊಂಡಿದ್ದಾರೆ.

ಸೆಪ್ಟೆಂಬರ್ 28ರಂದು ಗಂಗಾವತಿಯ ಹಿಂದೂ ಮಹಾ ಮಂಡಳಿಯ ಗಣಪತಿ ವಿಸರ್ಜನೆ ಮೆರವಣಿಗೆ ಜಾಮಿಯಾ ಮಸೀದಿ ಬಳಿ ಬಂದ ವೇಳೆ ಮಸೀದಿ ಬಾಗಿಲಿಗೆ ಆರತಿ ಬೆಳಗಿ, ಜೈಶ್ರೀರಾಮ್ ಸೇರಿದಂತೆ ಹಿಂದೂ ದೇವರ ಘೋಷಣೆ ಕೂಗಿದ್ದಾರೆ. ಗಲಭೆಯ ಉದ್ದೇಶದಿಂದಲೇ ಮಸೀದಿ ಬಾಗಿಲಿಗೆ ಆರತಿ ಬೆಳಗಿ ಹಿಂದೂ ದೇವರ ಹೆಸರಲ್ಲಿ ಘೋಷಣೆ ಕೂಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದ್ದು, ಈ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಗಂಗಾವತಿ ನಗರ ಠಾಣೆ ಪೋಲೀಸರು ಸ್ವಯಂಪ್ರೇರಿತವಾಗಿ ಎಫ್ಐಆರ್ ದಾಖಲಿಸಿಕೊಂಡು ಮುಂದಿನ ಕ್ರಮ ಜರುಗಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...