alex Certify ಅನುಮತಿ ಇಲ್ಲದೆ ಹನುಮಧ್ವಜ ಹಾರಿಸಿದ ಸಂಸದ ಅನಂತ್ ಕುಮಾರ್ ಹೆಗಡೆ ಸೇರಿ 21 ಮಂದಿ ವಿರುದ್ಧ ಎಫ್ಐಆರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅನುಮತಿ ಇಲ್ಲದೆ ಹನುಮಧ್ವಜ ಹಾರಿಸಿದ ಸಂಸದ ಅನಂತ್ ಕುಮಾರ್ ಹೆಗಡೆ ಸೇರಿ 21 ಮಂದಿ ವಿರುದ್ಧ ಎಫ್ಐಆರ್

ಕಾರವಾರ: ಉತ್ತರ ಕನ್ನಡ ಜಿಲ್ಲೆ ಭಟ್ಕಳ ತಾಲೂಕಿನ ಹೆಬಳೆಯ ತೆಂಗಿನಗುಂಡಿಯ ಬಂದರಿನಲ್ಲಿ ಅನುಮತಿ ಇಲ್ಲದೆ ಸಾವರ್ಕರ್ ನಾಮಫಲಕ ಹಾಕಿ, ಹನುಮಧ್ವಜ ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಟ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸಂಸದ ಅನಂತ್ ಕುಮಾರ್ ಹೆಗಡೆ ಸೇರಿ 21 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಹೆಬಳೆ ಗ್ರಾಮ ಪಂಚಾಯಿತಿ ವತಿಯಿಂದ ಜನವರಿ 27ರಂದು ತೆರವುಗೊಳಿಸಲಾಗಿದ್ದ ಭಗವಾಧ್ವಜವನ್ನು ಮಾ. 4 ರಂದು ಪುನಃ ಹಾರಿಸಿ ಕಟ್ಟೆಗೆ ವೀರ ಸಾವರ್ಕರ್ ಬೀಚ್ ನಾಮಫಲಕ ಹಾಕಲಾಗಿತ್ತು. ಈ ಸಂದರ್ಭದಲ್ಲಿ ಜೈ ಶ್ರೀ ರಾಮ್, ಹರ ಹರ ಮಹಾದೇವ್ ಎನ್ನುವ ಘೋಷಣೆ ಕೂಗಲಾಗಿತ್ತು. ಕಾರ್ಯಕರ್ತರೊಂದಿಗೆ ಸೇರಿ ಸಂಸದ ಅನಂತ್ ಕುಮಾರ್ ಹೆಗಡೆ ಭಗವಾಧ್ವಜ ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಟ್ಕಳ ಗ್ರಾಮೀಣ ಠಾಣೆ ಪೊಲೀಸರು ಅನಂತ್ ಕುಮಾರ್ ಹೆಗಡೆ ಸೇರಿ 21 ಮಂದಿ ಮೇಲೆ ಪ್ರಕರಣ ದಾಖಲಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...