ಬೆಂಗಳೂರು : ಕೆಫೆಯಲ್ಲಿ ನಡೆದ ಬೆಂಕಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಫೆ ಮಾಲೀಕ ಸೇರಿದಂತೆ ಇಬ್ಬರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಈ ಸಂಬಂಧ ಸದ್ದಗುಂಟೆಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೆಫೆ ಮಾಲೀಕ ಘಟನೆ ಬಳಿಕ ತಲೆಮರೆಸಿಕೊಂಡಿದ್ದಾನೆ.
ಕೆಫೆ ಮಾಲೀಕ ಕರಣ್ ಜೈನ್ ಹಾಗೂ ಕಟ್ಟಡ ಮಾಲೀಕ ಕುಟಾಲ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಐಪಿಸಿ ಸೆಕ್ಷನ್ 338, 286 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಎಫ್ಐಆರ್ ದಾಖಲಾಗುತ್ತಿದ್ದಂತೆ ಕೆಫೆ ಮಾಲೀಕ ಕರಣ್ ಜೈನ್ ಹಾಗೂ ಕಟ್ಟಡದ ಮಾಲೀಕ ಕುಟಾಲ್ಗೆ ನೋಟಿಸ್ ನೀಡಿದ್ದಾರೆ.