alex Certify ಮೀನು ಖಾದ್ಯ ಪ್ರಿಯರಿಗೆ ಬಾಯಲ್ಲಿ ನೀರು ತರಿಸುವ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೀನು ಖಾದ್ಯ ಪ್ರಿಯರಿಗೆ ಬಾಯಲ್ಲಿ ನೀರು ತರಿಸುವ ಸುದ್ದಿ

ಬೆಂಗಳೂರು: ಮನೆ ಮನೆಗೆ ತಾಜಾ ಮೀನು ತಲುಪಿಸುವ ಹೊಸ ಯೋಜನೆ ಜಾರಿಗೆ ಮೀನುಗಾರಿಕೆ ಇಲಾಖೆ ಮುಂದಾಗಿದೆ.

ಮುಜರಾಯಿ, ಮೀನುಗಾರಿಕೆ ಮತ್ತು ಬಂದರು ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಈ ಕುರಿತು ಮಾಹಿತಿ ನೀಡಿದ್ದು, ಆನ್ಲೈನ್ ಮೂಲಕ ಮನೆ ಬಾಗಿಲಿಗೆ ತಲುಪಿಸುವ ಯೋಜನೆ ರೂಪಿಸಲಾಗಿದೆ. ಈ ಸಂಬಂಧ ಹೊಸ ಅಪ್ಲಿಕೇಷನ್ ಸಿದ್ಧಪಡಿಸಲಾಗುತ್ತಿದ್ದು, ಶೀಘ್ರವೇ ಜಾರಿಗೆ ಬರಲಿದೆ ಎಂದು ಹೇಳಿದ್ದಾರೆ.

ನವೆಂಬರ್ 21 ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಕಾರ್ಯಾಗಾರ ನಡೆಯಲಿದ್ದು, ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಚಾಲನೆ ನೀಡಲಿದ್ದಾರೆ. ಈ ಕಾರ್ಯಾಗಾರದಲ್ಲಿ ಮೀನಿನ ಖಾದ್ಯಗಳನ್ನು ಪರಿಚಯಿಸಲಾಗುತ್ತದೆ. ಹೊಸ ಯೋಜನೆಯಿಂದ ಮೀನು ಉತ್ಪಾದಕರು, ಕೃಷಿಕರಿಗೆ ಅನುಕೂಲವಾಗುತ್ತದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...