alex Certify ಕಾರು – ಬೈಕಿಗೆ ಟ್ರಕ್ ಡಿಕ್ಕಿ: ಭೀಕರ ಅಪಘಾತದಲ್ಲಿ ಐವರ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾರು – ಬೈಕಿಗೆ ಟ್ರಕ್ ಡಿಕ್ಕಿ: ಭೀಕರ ಅಪಘಾತದಲ್ಲಿ ಐವರ ಸಾವು

ಕಂಟೈನರ್ ಟ್ರಕ್ ಕಾರು – ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮೃತಪಟ್ಟು ಇಬ್ಬರು ತೀವ್ರವಾಗಿ ಗಾಯಗೊಂಡಿರುವ ಘಟನೆ ರಾಜಸ್ಥಾನದ ಜಾಲ್ವಾರ್ ಜಿಲ್ಲೆಯ ಆಕೊಡಿಯ ಗ್ರಾಮದ ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ನಡೆದಿದೆ.

ಕಾರಿನಲ್ಲಿದ್ದ ಇಬ್ಬರು ಹಾಗೂ ಬೈಕಿನಲ್ಲಿದ್ದ ಮೂವರು ಸಾವನ್ನಪ್ಪಿದ್ದು, ಮತ್ತಿಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಕಾರಿನಲ್ಲಿದ್ದವರು ಮಧ್ಯ ಪ್ರದೇಶ ಮೂಲದವರಾಗಿದ್ದು, ಜಾಲ್ವಾರ್ ನ ಬಾಲಾಜಿ ಮಂದಿರಕ್ಕೆ ತೆರಳಿ ವಾಪಸ್ ಆಗುತ್ತಿದ್ದರೆ, ಬೈಕಿನಲ್ಲಿ ಮೂವರು ವಿದ್ಯಾರ್ಥಿಗಳು ಕಾಲೇಜು ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದರು ಎನ್ನಲಾಗಿದೆ.

ರತನ್ ಟಾಟಾ ಅವರಿಗೆ ಮಹಾರಾಷ್ಟ್ರದ HSNC ವಿವಿಯಿಂದ ಗೌರವ ‘ಡಾಕ್ಟರೇಟ್’

ಮೊದಲಿಗೆ ಕಾರಿಗೆ ಡಿಕ್ಕಿ ಹೊಡೆದ ಟ್ರಕ್ ಅದನ್ನು 50 ಮೀಟರ್ ದೂರದವರೆಗೆ ಎಳೆದುಕೊಂಡು ಹೋಗಿದ್ದು, ಬಳಿಕ ಬೈಕಿಗೆ ಡಿಕ್ಕಿ ಹೊಡೆದಿದೆ. ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಅವರ ಸಾವಿಗೆ ಸಂತಾಪ ಸೂಚಿಸಿದ್ದು, ಗಾಯಗೊಂಡ ಇಬ್ಬರ ಶೀಘ್ರ ಚೇತರಿಕೆಗೆ ಹಾರೈಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...