alex Certify ಭೀಕರ ಅಪಘಾತ: ಕಾರ್ ನಲ್ಲಿದ್ದ ಒಂದೇ ಕುಟುಂಬದ 5 ಮಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭೀಕರ ಅಪಘಾತ: ಕಾರ್ ನಲ್ಲಿದ್ದ ಒಂದೇ ಕುಟುಂಬದ 5 ಮಂದಿ ಸಾವು

ಅಮರಾವತಿ: ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯಲ್ಲಿ ಭಾನುವಾರ ಕಾರ್ ಮೋರಿಗೆ ಗುದ್ದಿದ ಪರಿಣಾಮ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದು, ಒಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಚಾಲಕನ ನಿಯಂತ್ರಣ ತಪ್ಪಿ ಕಾರ್ ಅಪಘಾತಕ್ಕೀಡಾಗಿದೆ.  ವಿಜಯವಾಡ-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯ ಗೌರವರಂ ಗ್ರಾಮದ ಬಳಿ ನಾಗಾರ್ಜುನ ಸಾಗರ್ ಎಡದಂಡೆ ಕಾಲುವೆಯ ಮೇಲಿನ ಸೇತುವೆಯ ಮೇಲೆ ಅಪಘಾತ ಸಂಭವಿಸಿದೆ.

ಇಬ್ಬರು ಮಹಿಳೆಯರು ಹಾಗೂ ಓರ್ವ ಪುರುಷ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಾಯಗೊಂಡವರನ್ನು ಜಗ್ಗಯ್ಯಪೇಟೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಯಲ್ಲಿ ಆರು ತಿಂಗಳ ಮಗು ಮತ್ತು ಓರ್ವ ಪುರುಷ ಸಾವನ್ನಪ್ಪಿದ್ದಾರೆ. ಗಾಯಗೊಂಡ ಮತ್ತೊಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಾರ್ ಮೋರಿಗೆ ಡಿಕ್ಕಿಯಾಗದೇ ಇದ್ದಿದ್ದರೆ ಗರಿಷ್ಠ ಮಟ್ಟದಲ್ಲಿ ಹರಿಯುತ್ತಿರುವ ಕಾಲುವೆಗೆ ಧುಮುಕುತ್ತಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಮೃತಪಟ್ಟವರೆಲ್ಲರೂ ಹೈದರಾಬಾದ್‌ ನ ಚಂದಾನಗರ ಮೂಲದ ಒಂದೇ ಕುಟುಂಬದ ಸದಸ್ಯರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಮಾರಂಭವೊಂದಕ್ಕೆ ಪಶ್ಚಿಮ ಗೋದಾವರಿ ಜಿಲ್ಲೆಯ ಜಂಗಾರೆಡ್ಡಿಗುಡೆಂಗೆ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...