alex Certify ಹುತಾತ್ಮ ಯೋಧರಿಗೆ ಪುಷ್ಪನಮನ : ನಾಳೆ ಶಿವಮೊಗ್ಗದಲ್ಲಿ ‘ವಿಜಯ ದಿವಸ’ ಆಚರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುತಾತ್ಮ ಯೋಧರಿಗೆ ಪುಷ್ಪನಮನ : ನಾಳೆ ಶಿವಮೊಗ್ಗದಲ್ಲಿ ‘ವಿಜಯ ದಿವಸ’ ಆಚರಣೆ

ಶಿವಮೊಗ್ಗ : ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯು ಡಿ. 16 ರಂದು ನಾಳೆ ಬೆಳಗ್ಗೆ 09.30 ಘಂಟೆಗೆ ಮಾನ್ಯ ಜಿಲ್ಲಾಧಿಕಾರಿಗಳ ಉಪಸ್ಥಿತಿಯಲ್ಲಿ 1971ರ ಯುದ್ಧದ ವಿಜಯ ದಿವಸವನ್ನು ಶಿವಮೊಗ್ಗದ ಸೈನಿಕ ಉದ್ಯಾನವನದಲ್ಲಿ ಹುತಾತ್ಮ ಯೋಧರಿಗೆ ಪುಷ್ಪನಮನ ಅರ್ಪಿಸುವ ಮೂಲಕ ಆಚರಿಸಲಾಗುತ್ತಿದೆ.

ಈ ಸಮಾರಂಭದಲ್ಲಿ ಜಿಲ್ಲೆಯ ಎಲ್ಲಾ ಮಾಜಿ ಸೈನಿಕರು, ವೀರನಾರಿಯರು, ಮಾಜಿ ಸೈನಿಕರ ಅವಲಂಬಿತರು ಹಾಗೂ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಉಪ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182-220925 ಯನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...