alex Certify ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಲು ವಾಸ್ತು ಶಾಸ್ತ್ರದ ಈ ನಿಯಮಗಳನ್ನು ಅನುಸರಿಸಿ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಲು ವಾಸ್ತು ಶಾಸ್ತ್ರದ ಈ ನಿಯಮಗಳನ್ನು ಅನುಸರಿಸಿ…!

ಪರೀಕ್ಷೆಯಲ್ಲಿ ಚೆನ್ನಾಗಿ ಬರೆದರೆ ಮಾತ್ರ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಿರುತ್ತದೆ. ಹಾಗಾಗಿ ಪ್ರತಿಯೊಬ್ಬರ ಜೀವನದಲ್ಲಿ ಪರೀಕ್ಷೆಗೆ ಪ್ರಮುಖ ಸ್ಥಾನವಿದೆ. ವಾಸ್ತುವಿನ ಪ್ರಕಾರ ಬುಧವು ಬುದ್ಧಿವಂತಿಕೆ ಮತ್ತು ಜ್ಞಾನದ ಗ್ರಹವಾಗಿದೆ. ಇದರ ಬಲವಾದ ಸ್ಥಾನವು ಜ್ಞಾನಕ್ಕೆ ಸಂಬಂಧಿಸಿದ ಕೆಲಸದಲ್ಲಿ ಯಶಸ್ಸಿಗೆ ಕಾರಣವಾಗುತ್ತದೆ.

ಶುಕ್ರ ಗ್ರಹವು ಸೃಜನಶೀಲತೆಯನ್ನು ಉತ್ತೇಜಿಸುತ್ತದೆ. ವಿದ್ಯಾರ್ಥಿಗಳು ಪರೀಕ್ಷೆಗಳ ಬಗ್ಗೆ ತುಂಬಾ ಚಿಂತಿತರಾಗಿರುತ್ತಾರೆ. ಕೆಲವೊಮ್ಮೆ ಕಠಿಣ ಪರಿಶ್ರಮಪಟ್ಟರೂ ಉತ್ತಮ ಅಂಕ ಗಳಿಸಲು ಸಾಧ್ಯವಾಗುವುದಿಲ್ಲ. ಅಂತಹ ಸಂದರ್ಭಗಳಲ್ಲಿ ವಾಸ್ತು ದೋಷ ಸಹ ಅದಕ್ಕೆ ಕಾರಣವೆಂದು ಪರಿಗಣಿಸಬಹುದು. ಹಾಗಾಗಿ ಪರೀಕ್ಷೆಗೆ ಸಿದ್ಧವಾಗುವ ವೇಳೆ ಕೆಲವೊಂದು ವಾಸ್ತು ನಿಯಮಗಳನ್ನು ಅನುಸರಿಸಬೇಕು.

ಸರಿಯಾದ ದಿಕ್ಕಿನಲ್ಲಿ ಕುಳಿತು ಓದುವುದು ವಾಸ್ತು ಶಾಸ್ತ್ರವು ಪುರಾತನ ವಿಜ್ಞಾನವಿದ್ದಂತೆ. ಮನೆ ಅಥವಾ ಇತರ ಯಾವುದೇ ಸ್ಥಳದ ರಚನೆಯ ಪ್ರಕಾರ ಧನಾತ್ಮಕ ಶಕ್ತಿಯನ್ನು ಉತ್ತೇಜಿಸಲು ಇದರಲ್ಲಿ ಕ್ರಮಗಳನ್ನು ಸೂಚಿಸಲಾಗಿದೆ. ಇದರ ಪ್ರಕಾರ ವಿದ್ಯಾರ್ಥಿಗಳು ಅಧ್ಯಯನ ಮಾಡುವಾಗ ಪೂರ್ವ ಅಥವಾ ಉತ್ತರದ ಕಡೆಗೆ ಮುಖವನ್ನು ಇಟ್ಟುಕೊಳ್ಳಬೇಕು. ಏಕೆಂದರೆ ಅದು ಧನಾತ್ಮಕ ಶಕ್ತಿಯನ್ನು ರವಾನಿಸುತ್ತದೆ.

ಸ್ಥಳಕೆಲವರು ನೈಸರ್ಗಿಕ ಬೆಳಕು ಮತ್ತು ಗಾಳಿಯ ಹುಡುಕಾಟದಲ್ಲಿ ಕಿಟಕಿ ಅಥವಾ ಬಾಗಿಲಿನ ಬಳಿ ಕುಳಿತು ಓದುತ್ತಾರೆ. ವಾಸ್ತು ಶಾಸ್ತ್ರದ ಪ್ರಕಾರ ಈ ರೀತಿ ಮಾಡಿದರೆ ಮಕ್ಕಳು ಅಧ್ಯಯನದ ಮೇಲೆ ಕೇಂದ್ರೀಕರಿಸುವುದಿಲ್ಲ. ಅವರ ಗಮನವು ಹಾದುಹೋಗುವ ಜನರು ಅಥವಾ ದೃಶ್ಯಗಳ ಮೇಲೆ ಕೇಂದ್ರೀಕೃತವಾಗಿರುತ್ತದೆ.

ಧ್ಯಾನಧ್ಯಾನವು ನಮ್ಮ ಮನಸ್ಸಿಗೆ ಶಾಂತಿಯನ್ನು ನೀಡುತ್ತದೆ ಮತ್ತು ಏಕಾಗ್ರತೆಯನ್ನು ಹೆಚ್ಚಿಸುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಅಧ್ಯಯನಕ್ಕೂ ಮೊದಲು ಕೆಲವು ನಿಮಿಷಗಳ ಕಾಲ ಧ್ಯಾನ ಮಾಡಬೇಕು. ಇದರಿಂದ ಅವರ ಮನಸ್ಸು ಅಧ್ಯಯನದ ಮೇಲೆ ಕೇಂದ್ರೀಕೃತವಾಗಿರುತ್ತದೆ.

ಸಕಾಲಬೆಳಗಿನ ಸಮಯವಾದ ಬ್ರಹ್ಮ ಮುಹೂರ್ತ ಓದಲು ಉತ್ತಮ ಸಮಯ. ಈ ಸಮಯದಲ್ಲಿ ಅಧ್ಯಯನ ಮಾಡಿದರೆ ಅದು ದೀರ್ಘಕಾಲದವರೆಗೆ ನೆನಪಿನಲ್ಲಿರುತ್ತದೆ.

ಗಾಯತ್ರಿ ಮಂತ್ರಈ ಮಂತ್ರವು ಜ್ಞಾನ ಮತ್ತು ಧ್ಯಾನವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಇದನ್ನು ಪ್ರತಿನಿತ್ಯ ಪಠಿಸುವುದು ಶುಭಕರ.

ತುಳಸಿ ಪೂಜೆತುಳಸಿಯನ್ನು ಪೂಜಿಸುವುದರಿಂದ ಮನಸ್ಸು ಶಾಂತವಾಗಿರುತ್ತದೆ ಮತ್ತು ಏಕಾಗ್ರತೆಯಿಂದ ಕೂಡಿರುತ್ತದೆ. ಇದು ಅಧ್ಯಯನಕ್ಕೆ ಸಹಾಯಕವಾಗುತ್ತದೆ.

ಹಳದಿ ದಾರಎಡಗೈಯಲ್ಲಿ ಹಳದಿ ದಾರವನ್ನು ಕಟ್ಟಿಕೊಳ್ಳುವುದು ಪರೀಕ್ಷೆಯಲ್ಲಿ ಪ್ರಯೋಜನಕಾರಿ ಎಂದು ಜ್ಯೋತಿಷ್ಯ ಶಾಸ್ತ್ರದಲ್ಲಿ ಹೇಳಲಾಗಿದೆ. ಇದರಿಂದ ಜ್ಞಾನದ ಅಧಿದೇವತೆಯಾದ ಸರಸ್ವತಿ ದೇವಿಯ ಆಶೀರ್ವಾದವನ್ನು ವಿದ್ಯಾರ್ಥಿಗಳು ಪಡೆಯುತ್ತಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...