alex Certify ಪಡಿತರ ಚೀಟಿದಾರರಿಗೆ ಮುಖ್ಯ ಮಾಹಿತಿ: ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಇ-ಕೆವೈಸಿಗೆ ಆ. 31 ಅಂತಿಮ ಗಡುವು: ಸದಸ್ಯರ ಹೆಸರು ಡಿಲಿಟ್, ರೇಷನ್ ಸ್ಥಗಿತ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಡಿತರ ಚೀಟಿದಾರರಿಗೆ ಮುಖ್ಯ ಮಾಹಿತಿ: ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಇ-ಕೆವೈಸಿಗೆ ಆ. 31 ಅಂತಿಮ ಗಡುವು: ಸದಸ್ಯರ ಹೆಸರು ಡಿಲಿಟ್, ರೇಷನ್ ಸ್ಥಗಿತ ಸಾಧ್ಯತೆ

ಪಡಿತರ ಚೀಟಿದಾರರ ಇ-ಕೆವೈಸಿ ಸಂಗ್ರಹಣೆ ಮಾಡಿಸಲು ಆಗಸ್ಟ್ 31 ಅಂತಿಮ ಗಡುವು ನಿಗದಿಪಡಿಸಿದೆ. ಇ-ಕೆವೈಸಿ ಸಂಗ್ರಹಣೆಯಾಗಿಲ್ಲದ ಪಡಿತರ ಚೀಟಿದಾರರು ತಪ್ಪದೇ ಇ-ಕೆವೈಸಿ ಮಾಡಿಸಿಕೊಳ್ಳಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ತಿಳಿಸಿದೆ.

ಪಡಿತರ ಚೀಟಿದಾರರ ಇ.ಕೆ.ವೈ.ಸಿ ಸಂಗ್ರಹಣೆಯನ್ನು 2017ರಿಂದ ನ್ಯಾಯಬೆಲೆ ಅಂಗಡಿಗಳ ಮೂಲಕ ಸಂಗ್ರಹಣೆ ಮಾಡಲಾಗುತ್ತಿದೆ. ಪಡಿತರ ಚೀಟಿಯಲ್ಲಿನ ಸದಸ್ಯರ ಇ-ಕೆ.ವೈ.ಸಿ ಸಂಗ್ರಹಣೆಯಾಗದೇ ಇದ್ದಲ್ಲಿ ಮುಂಬರುವ ದಿನಗಳಲ್ಲಿ ಅಂತಹ ಪಡಿತರ ಚೀಟಿಗಳು, ಸದಸ್ಯರುಗಳ ಹೆಸರುಗಳು ಪಡಿತರ ಚೀಟಿಗಳಿಂದ ಬಿಟ್ಟು ಹೋಗುವ ಮತ್ತು ಆಹಾರಧಾನ್ಯ ಹಂಚಿಕೆ ಸ್ಥಗಿತಗೊಳ್ಳುವ ಸಂಭವವಿರುತ್ತದೆ.

ಆದ್ದರಿಂದ ಇ-ಕೆ.ವೈ.ಸಿ ಸಂಗ್ರಹಣೆಯಾಗಿಲ್ಲದ್ದ ಪಡಿತರ ಚೀಟಿದಾರರು, ಸದಸ್ಯರು ಇದೇ ಆಗಸ್ಟ್ 31ರೊಳಗೆ ತಾವು ರಾಜ್ಯದ, ಜಿಲ್ಲೆಯ, ತಾಲ್ಲೂಕಿನ, ಹಳ್ಳಿಯ, ತಾವು ಇರುವ ಸ್ಥಳದಲ್ಲಿಯೇ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ತಮ್ಮ ಜೀವಮಾಪನ ನೀಡಿ ಇ-ಕೆ.ವೈ.ಸಿ ಸಂಗ್ರಹಿಸಿಕೊಳ್ಳಲು ಪಡಿತರ ಚೀಟಿದಾರರಿಗೆ ಅಂತಿಮ ಗಡುವು ನೀಡಿದ್ದು, ತಪ್ಪದೇ ಇ.ಕೆ.ವೈ.ಸಿ ಮಾಡಿಸಬೇಕಿದೆ.

ಚಿತ್ರದುರ್ಗ ಜಿಲ್ಲೆಯ ಇ-ಕೆ.ವೈ.ಸಿ ಸಂಗ್ರಹಣೆಯ ಪ್ರಗತಿಯನ್ನು ಪರಾಮರ್ಶೆ ಮಾಡಲಾಗಿ, ಇದುವರೆಗೂ ಜಿಲ್ಲೆಯಲ್ಲಿ ಅಂತ್ಯೋದಯ ಪಡಿತರ ಚೀಟಿ ಸದಸ್ಯರ ಶೇ.96.34 ಮತ್ತು ಆದ್ಯತಾ ಪಡಿತರ ಚೀಟಿ ಸದಸ್ಯರ ಶೇ.97.18 ಸೇರಿದಂತೆ ಒಟ್ಟು ಶೇ.97.07ರಷ್ಟು ಇ-ಕೆ.ವೈ.ಸಿ ಸಂಗ್ರಹಣೆ ಮಾಡಲಾಗಿದೆ ಎಂದು ಚಿತ್ರದುರ್ಗ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...