alex Certify BIG NEWS : ಸದನದಲ್ಲಿ ‘ಜೈನ ಮುನಿ’ ಹತ್ಯೆ ಪ್ರಕರಣ ಪ್ರಸ್ತಾಪಿಸಿದ ಮಾಜಿ ಸಿಎಂ ಬೊಮ್ಮಾಯಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಸದನದಲ್ಲಿ ‘ಜೈನ ಮುನಿ’ ಹತ್ಯೆ ಪ್ರಕರಣ ಪ್ರಸ್ತಾಪಿಸಿದ ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರು : ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಜೈನಮುನಿ ಬರ್ಬರ ಹತ್ಯೆ ಪ್ರಕರಣದ ಬಗ್ಗೆ ಸದನದಲ್ಲಿ ಸಿಎಂ ಬೊಮ್ಮಾಯಿ ಪ್ರಸ್ತಾಪಿಸಿದರು.

ಜೈನಮುನಿ ಬರ್ಬರ ಹತ್ಯೆ ಪ್ರಕರಣದ ಬಗ್ಗೆ ಪ್ರಸ್ತಾಪಿಸಿದ ಬೊಮ್ಮಾಯಿ ಸದನದಲ್ಲಿ ಚರ್ಚೆ ನಡೆಸಲು ಅವಕಾಶ ಕೇಳಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಸ್ಪೀಕರ್ ಯು.ಟಿ ಖಾದರ್ ‘ಜೈನಮುನಿ ಬರ್ಬರ ಹತ್ಯೆ ಪ್ರಕರಣದ ಬಗ್ಗೆ ಚರ್ಚೆ ನಡೆಸಲು ಶೂನ್ಯವೇಳೆಯಲ್ಲಿ ಅವಕಾಶ ಕೊಡುವುದಾಗಿ ಹೇಳಿದ್ದಾರೆ.

ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ತನಿಖೆಗೆ ಆದೇಶಿಸಲಾಗಿದ್ದು, ಇಬ್ಬರು ಆರೊಪಿಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.ಹುಬ್ಬಳ್ಳಿಯ ವರೂರಿನಲ್ಲಿ ಮಾತನಾಡಿದ ಗೃಹ ಸಚಿವರು, ಜೈನಮುನಿ ಹತ್ಯೆ ವಿಚಾರದಲ್ಲಿ ಯಾರೂ ರಾಜಕೀಯ ಮಾಡಬಾರದು ಎಂದು ಹೇಳಿದರು.ಜೈನಮುನಿ ಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವ ಅನಿವಾರ್ಯತೆ ಇಲ್ಲ. ಯಾರು ಈ ಕೃತ್ಯವೆಸಗಿದ್ದಾರೆ ಎಂಬುದು ಈಗಾಗಲೇ ನಡೆದಿರುವ ತನಿಖೆಯಿಂದ ಗೊತ್ತಾಗಲಿದೆ ಎಂದರು.ಆರೋಪಿಗಳನ್ನು ರಾಜ್ಯ ಸರ್ಕಾರ ರಕ್ಷಣೆ ಮಾಡುತ್ತಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವರು, ಜನಪ್ರತಿನಿಧಿಗಳು ಯಾರೂ ಕೂಡ ಈ ರೀತಿ ಮಾತನಾಡಬಾರದು. ಈಗಾಗಲೇ ಡಿವೈಎಸ್ ಪಿ ನೇತೃತ್ವದಲ್ಲಿ ಪ್ರಕರಣದ ತನಿಖೆ ನಡೆಯುತ್ತಿದೆ. ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದರು.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...