![](https://kannadadunia.com/wp-content/uploads/2024/05/raghupati-bhat.jpg)
ಬೆಂಗಳೂರು: ಬಿಜೆಪಿಯಿಂದ ಮಾಜಿ ಶಾಸಕ ರಘುಪತಿ ಭಟ್ ಅವರನ್ನು ಉಚ್ಚಾಟಿಸಲಾಗಿದೆ. ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ರಘುಪತಿ ಭಟ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ.
ಟಿಕೆಟ್ ಸಿಗದಿರುವುದಕ್ಕೆ ರಘುಪತಿ ಭಟ್ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಕಣಣದಿಂದ ಹಿಂದೆ ಸರಿಯುವಂತೆ ಬಿಜೆಪಿಯಿಂದ ಅವರಿಗೆ ನೋಟಿಸ್ ನೀಡಲಾಗಿತ್ತು. ಪಕ್ಷದ ಹಿರಿಯ ನಾಯಕರು ಕೂಡ ಮನವೊಲಿಸಲು ಪ್ರಯತ್ನ ನಡೆಸಿದ್ದರು.
ಆದರೂ ನಾಮಪತ್ರ ಹಿಂಪಡೆಯದೇ ಕಣದಲ್ಲಿ ಉಳಿದ ರಘುಪತಿ ಭಟ್ ಪ್ರಚಾರ ನಡೆಸಿದ್ದಾರೆ. ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ರಘುಪತಿ ಭಟ್ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಲಾಗಿದೆ.