alex Certify ಚಾಲಕನ ನಿರ್ಲಕ್ಷ್ಯಕ್ಕೆ ನಾಲ್ವರು ಬಲಿ; ಜನರಿಗೆ ಮಾತ್ರ ಅಲ್ಲಿ ಬಿದ್ದಿದ್ದ ಮೀನುಗಳದ್ದೇ ಚಿಂತೆ….! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಾಲಕನ ನಿರ್ಲಕ್ಷ್ಯಕ್ಕೆ ನಾಲ್ವರು ಬಲಿ; ಜನರಿಗೆ ಮಾತ್ರ ಅಲ್ಲಿ ಬಿದ್ದಿದ್ದ ಮೀನುಗಳದ್ದೇ ಚಿಂತೆ….!

ಆಂಧ್ರಪ್ರದೇಶದ ತಡೆಪಲ್ಲಿಗುಡೆಂ ಪ್ರದೇಶದಲ್ಲಿ ಚಾಲಕನ ನಿರ್ಲಕ್ಷ್ಯದಿಂದಾಗಿ ಭೀಕರ ಅಪಘಾತವೊಂದು ಸಂಭವಿಸಿದ್ದು ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಚಾಲಕ ನಿದ್ರೆಗೆ ಜಾರಿದ ಹಿನ್ನೆಲೆಯಲ್ಲಿ ಮೀನು ತುಂಬಿದ್ದ ಲಾರಿ ಪಲ್ಟಿಯಾಗಿದ್ದು, ಜನರು ಮಾತ್ರ ಮಾನವೀಯತೆ ಮರೆತು ಮೀನುಗಳಿಗಾಗಿ ಮುಗಿಬಿದ್ದಿದ್ದರು.

ಈ ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದು, 10ಕ್ಕೂ ಅಧಿಕ ಜನ ಗಾಯಗೊಂಡಿದ್ದಾರೆ. ವಾಹನ ಪಲ್ಟಿಯಾಗುತ್ತಿದ್ದಂತೆ ಮೀನುಗಳೆಲ್ಲ ರಸ್ತೆ ಪಾಲಾಗಿವೆ. ಒಂದೆಡೆ ಸತ್ತವರ ಹೆಣಗಳು ಬಿದ್ದಿದ್ದವು. ಆದರೆ, ಜನರು ಮಾತ್ರ ಮೀನುಗಳನ್ನೆಲ್ಲ ತೆಗೆದುಕೊಂಡು ಹೋಗಲು ಮುಗಿಬಿದ್ದಿದ್ದರು.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿರುವ ಪೊಲೀಸರು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಕುರಿತು ದೂರು ದಾಖಲಿಸಿಕೊಂಡಿರುವ ಪೊಲೀಸರು ಚಾಲಕನ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...