ಬೆಂಗಳೂರು : ಡ್ರೋನ್ ಪ್ರತಾಪ್ ಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ದೂರು ನೀಡಲು ಜೆಡಿಎಸ್ ಸಿದ್ದತೆ ನಡೆಸಿದೆ.
ಮಾಜಿ ಸಿಎಂ ಕುಮಾರಸ್ವಾಮಿ ಹೆಸರು ಹೇಳಿಕೊಂಡು ಜಿಲ್ಲಾ ಪಂಚಾಯತ್ ಟಿಕೆಟ್ ನೀಡುವುದಾಗಿ ವಂಚನೆ ಮಾಡಿರುವ ಆರೋಪದ ಹಿನ್ನೆಲೆ ಜೆಡಿಎಸ್ ದೂರು ನೀಡಲು ಸಿದ್ದತೆ ನಡೆಸಿದೆ.ಜಿಲ್ಲಾ ಪಂಚಾಯಿತಿ ಟಿಕೆಟ್ ಕೊಡಿಸುತ್ತೇನೆ ಎಂದು ನಂಬಿಸಿ ಡ್ರೋನ್ ಪ್ರತಾಪ್ 2 ಲಕ್ಷ ಹಣ ಪಡೆದು ವಂಚನೆ ಮಾಡಿದ್ದಾರೆ ಎಂದು ಚಂದನ್ ಕುಮಾರ್ ಗೌಡ ಎಂಬುವವರು ಪೊಲೀಸ್ ಆಯುಕ್ತ ದಯಾನಂದ್ ಅವರಿಗೆ ದೂರು ನೀಡಿದ್ದಾರೆ.
ಮಾಜಿ ಸಿಎಂ ಕುಮಾರಸ್ವಾಮಿ ನನಗೆ ಬಹಳ ಪರಿಚಯರು, ಆಗಾಗ ಅವರನ್ನು ಫಾರ್ಮ್ ಹೌಸ್ ನಲ್ಲಿ ಭೇಟಿ ಮಾಡುತ್ತೇನೆ. ನಾನು ಹೆಚ್ಡಿಕೆ ಆಗಾಗ ಭೇಟಿ ಮಾಡುತ್ತಿರುತ್ತೇವೆ. ನಿಮಗೆ ಖಂಡಿತವಾಗಿ ಜಿಲ್ಲಾ ಪಂಚಾಯತ್ ಟಿಕೆಟ್ ಕೊಡಿಸುತ್ತೇವೆ ಎಂದು ಹೇಳಿ ಡ್ರೋನ್ ಪ್ರತಾಪ್ 2 ಲಕ್ಷ ಹಣ ಪಡೆದು ವಂಚಿಸಿರುವ ಆರೋಪ ಕೇಳಿಬಂದಿದ್ದು, ಪ್ರತಾಪ್ ಹಾಗೂ ಚಂದನ್ ಅವರು ಫೋನ್ ನಲ್ಲಿ ಮಾತನಾಡಿರುವ ಸಂಭಾಷಣೆಯ ಆಡಿಯೋ ಕೂಡ ವೈರಲ್ ಆಗಿದೆ.