ಮಲೆನಾಡು ಭಾಗಗಳಲ್ಲಿ ಹೆಚ್ಚಾಗಿ ಕಾಡುತ್ತಿರುವ ಕ್ಯಾಸನೂರು ಫಾರೆಸ್ಟ್ ಡಿಸೀಸ್ (ಕೆಎಫ್ಡಿ) ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಸರ್ವ ಪ್ರಯತ್ನ ನಡೆಸುತ್ತಿದ್ದು, ಇದರ ಮಧ್ಯೆ ಮಹತ್ವದ ತೀರ್ಮಾ ನ ಕೈಗೊಳ್ಳಲಾಗಿದೆ.
ಈ ಕುರಿತಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದು, ನಮ್ಮ ಸರ್ಕಾರ ಸರ್ವ ಪ್ರಯತ್ನಗಳನ್ನು ನಡೆಸುತ್ತಿದೆ. ರೋಗದಿಂದ ಬಾಧಿತರಾದವರಿಗೆ ಚಿಕಿತ್ಸೆ ಉಚಿತವಾಗಿದ್ದು, ಈ ಯೋಜನೆಯನ್ನು ಎಪಿಎಲ್ ಕುಟುಂಬಗಳಿಗೂ ವಿಸ್ತರಿಸಲಾಗಿದೆ ಎಂದು ಹೇಳಿದ್ದಾರೆ.
ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಅಡಿ ನೋಂದಾಯಿಸಿಕೊಂಡಿರುವ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ದೊರೆಯಲಿದೆ. ಇದರಿಂದ ನೂರಾರು ಕುಟುಂಬಗಳಿಗೆ ಸಹಾಯವಾಗಲಿದೆ ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.