alex Certify ಗೆಳೆಯನಿಂದಲೇ ಘೋರ ಕೃತ್ಯ: ಪಾರ್ಟಿ ವೇಳೆ ಸ್ನೇಹಿತರ ನಡುವೆ ಜಗಳ ಕೊಲೆಯಲ್ಲಿ ಅಂತ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗೆಳೆಯನಿಂದಲೇ ಘೋರ ಕೃತ್ಯ: ಪಾರ್ಟಿ ವೇಳೆ ಸ್ನೇಹಿತರ ನಡುವೆ ಜಗಳ ಕೊಲೆಯಲ್ಲಿ ಅಂತ್ಯ

 ಬೆಂಗಳೂರು: ಕುಡಿದ ಮತ್ತಿನಲ್ಲಿ ಗೆಳೆಯರ ನಡುವೆ ಗಲಾಟೆ ನಡೆದು ಕೊಲೆಯಲ್ಲಿ ಅಂತ್ಯವಾಗಿದೆ. ಬೆಂಗಳೂರಿನ ಕೆಂಗೇರಿ ಪೊಲೀಸ್ ಠಾಣಾಣ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸ್ನೇಹಿತನನ್ನು ಕೊಲೆ ಮಾಡಿ ನಾಟಕ ಮಾಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಸ್ನೇಹಿತ ರಾಜಕುಮಾರ್ ಗೆ ಚಾಕುವಿನಿಂದ ಇರಿದು ಮಾದೇಶ ಎಂಬಾತ ಕೊಲೆ ಮಾಡಿದ್ದ. ನಂತರ ತಾನೇ ಸ್ನೇಹಿತನನ್ನು ಆಸ್ಪತ್ರೆಗೆ ದಾಖಲಿಸಿದ್ದ ಮಾದೇಶ ಯಾರೋ ಅಪರಿಚಿತರು ಕೃತ್ಯವೆಸಗಿದ್ದಾರೆ ಎಂದು ಹೇಳಿ ನಾಟಕವಾಡಿದ್ದ.

ಸ್ನೇಹಿತನ ಸಾವಿನ ಸುದ್ದಿ ಕೇಳುತ್ತಿದ್ದಂತೆ ಮಾದೇಶ ಪರಾರಿಯಾಗಿದ್ದು, ಪೊಲೀಸ್ ತನಿಖೆ ವೇಳೆ ಆತನ ಕೃತ್ಯ ಬಯಲಾಗಿದೆ. ಕ್ಯಾಬ್ ಚಾಲಕರಾಗಿದ್ದ ರಾಜಕುಮಾರ್ ಮತ್ತು ಮಾದೇಶ ಸ್ನೇಹಿತರಾಗಿದ್ದರು. ನವೆಂಬರ್ 5ರಂದು ಇಬ್ಬರು ಸೇರಿ ನಿರ್ಜನ ಪ್ರದೇಶದಲ್ಲಿ ಎಣ್ಣೆ ಪಾರ್ಟಿ ಮಾಡಿದ್ದರು. ಸ್ನೇಹಿತ ಮಾದೇಶ ಕುಟುಂಬದ ಬಗ್ಗೆ ರಾಜಕುಮಾರ್ ನಿಂದಿಸಿದ್ದಾನೆ. ಇಬ್ಬರ ನಡುವೆ ಜಗಳವಾಗಿ ರಾಜಕುಮಾರ್ ಗೆ ಮಾದೇಶ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ತಲೆಮರೆಸಿಕೊಂಡಿದ್ದ ಆರೋಪಿ ಮಾದೇಶನನ್ನು ಕೆಂಗೇರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...