alex Certify ನಾಳೆಯಿಂದ ಹೆಚ್ಚು ಹಾಲಿನ ಜೊತೆ ಹೆಚ್ಚು ಪೋಷಕಾಂಶವು ‘ನಂದಿನಿ’ ಗ್ರಾಹಕರ ಮನೆ ತಲುಪಲಿದೆ -CM ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆಯಿಂದ ಹೆಚ್ಚು ಹಾಲಿನ ಜೊತೆ ಹೆಚ್ಚು ಪೋಷಕಾಂಶವು ‘ನಂದಿನಿ’ ಗ್ರಾಹಕರ ಮನೆ ತಲುಪಲಿದೆ -CM ಸಿದ್ದರಾಮಯ್ಯ

ಬೆಂಗಳೂರು : ನಮ್ಮ ಸರ್ಕಾರ ಹಾಲಿನ ದರವನ್ನು ಹೆಚ್ಚಳ ಮಾಡಿಲ್ಲ, ನಾಳೆಯಿಂದ ಹೆಚ್ಚು ಹಾಲಿನ ಜೊತೆ ಹೆಚ್ಚು ಪೋಷಕಾಂಶವು ನಂದಿನಿ ಗ್ರಾಹಕರ ಮನೆ ತಲುಪಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ  ‘ನಮ್ಮ ಸರ್ಕಾರ ಹಾಲಿನ ದರವನ್ನು ಹೆಚ್ಚಳ ಮಾಡಿಲ್ಲ. ಒಂದು ಲೀಟರ್ ಪ್ಯಾಕೇಟಿನಲ್ಲಿ ಇನ್ನುಮುಂದೆ 1,050 ಮಿಲೀ, ಅರ್ಧ ಲೀಟರ್ ಪ್ಯಾಕೇಟಿನಲ್ಲಿ 550 ಮಿಲೀ ಹಾಲು ದೊರೆಯಲಿದ್ದು, ಈ 50 ಮಿಲೀ ಹೆಚ್ಚುವರಿ ಹಾಲಿಗೆ ಗ್ರಾಹಕರಿಂದ ರೂ.2 ಸಂಗ್ರಹಿಸಲಾಗುತ್ತದೆ. ಹೀಗಾಗಿ ಲೀಟರ್ ಪ್ಯಾಕೇಟ್ ರೂ.44, ಅರ್ಧ ಲೀಟರ್ ಪ್ಯಾಕೇಟ ರೂ.24ಕ್ಕೆ ಹೆಚ್ಚು ಹಾಲಿನ ಜೊತೆ ಲಭ್ಯವಾಗಲಿದೆ. ಕಳೆದ ಕೆಲವು ತಿಂಗಳಿಂದ ಹಾಲಿನ ಉತ್ಪಾದನೆ ಗಣನೀಯ ಏರಿಕೆಯಾಗಿದ್ದು, ನಿತ್ಯದ ಸರಾಸರಿ ಉತ್ಪಾದನೆ 89 ಲಕ್ಷ ಲೀಟರ್ ನಿಂದ 1 ಕೋಟಿ ಲೀಟರ್ ಸಮೀಪಕ್ಕೆ ಬಂದಿದೆ’.

‘ಡೈಲಿಗಳಲ್ಲಿ ರೈತರು ತರುವ ಹೆಚ್ಚುವರಿ ಹಾಲನ್ನು ನಿರಾಕರಿಸಬಾರದು ಜೊತೆಗೆ ಗ್ರಾಹಕರಿಗೂ ಹೊರೆಯಾಗದ ರೀತಿ ಹಾಲನ್ನು ತಲುಪಿಸುವ ಉದ್ದೇಶದಿಂದ ಕೆ.ಎಂ.ಎಫ್ ಸಂಸ್ಥೆಯು ಈ ನಿರ್ಣಯ ಕೈಗೊಂಡಿದೆ. ನಾಳೆಯಿಂದ ಹೆಚ್ಚು ಹಾಲಿನ ಜೊತೆ ಹೆಚ್ಚು ಪೋಷಕಾಂಶವು ನಂದಿನಿ ಗ್ರಾಹಕರ ಮನೆ ತಲುಪಲಿದೆ’ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...