alex Certify ಹಾಡಹಗಲೇ ಮಾರಕಾಸ್ತ್ರಗಳನ್ನು ಹಿಡಿದು ಬೀದಿಯಲ್ಲಿ ಹೊಡೆದಾಡಿಕೊಂಡ ಯುವಕರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಾಡಹಗಲೇ ಮಾರಕಾಸ್ತ್ರಗಳನ್ನು ಹಿಡಿದು ಬೀದಿಯಲ್ಲಿ ಹೊಡೆದಾಡಿಕೊಂಡ ಯುವಕರು

ಗದಗ: ಹಾಡಹಗಲೇ ಬೀದಿಯಲ್ಲಿ ಯುವಕರಿಬ್ಬರು ಮರಕಾಸ್ತ್ರಗಳಿಂದ ಹೊಡೆದಾಡಿಕೊಂಡಿರುವ ಘಟನೆ ಗದಗ ನಗರದ ಚನ್ನಮ್ಮ ಸರ್ಕಲ್ ನಲ್ಲಿ ನಡೆದಿದೆ.

ಹಣಕಾಸು ಹಾಗೂ ಕೌಟುಂಬಿಕ ಕಾರಣದಿಂದ ಇಬ್ಬರು ಯುವಕರು ಚಾಕು ಹಿಡಿದುಕೊಂಡು ಹೊಡೆದಾಡಿಕೊಂಡಿದ್ದಾರೆ ಎನ್ನಲಾಗಿದೆ. ಫಕಿರೇಶ ನಂದಿಹಳ್ಳಿ ಹಾಗೂ ಗಂಗಾಧರ ಹಿರೇಮಠ ಹೊಡೆದಾಡಿಕೊಂಡ ಯುವಕರು.

ಮುಂಡರಗಿ ತಾಲೂಕಿನ ಚರ್ಚಿಹಾಳ ಗ್ರಾಮದ ನಿವಾಸಿಗಳಾದ ಇಬ್ಬರೂ ಗದಗ ನಾಗರದ ಹುಡೋ ಕಾಲೋನಿಯಲ್ಲಿ ನಾಲ್ಕು ವರ್ಷಗಳಿಂದ ವಾಸವಗಿದ್ದರು. ಇಬ್ಬರ ನಡುವೆ ಹಣಕಾಸು ವಿಚಾರವಾಗಿ ಜಗಳವಾಗಿತ್ತು. ಇದೇ ವೇಳೆ ಫಕಿರೇಶನ ಮಗಳು ಗಂಗಾಧರನ ಮನೆಗೆ ಬಂದು ನಮ್ಮ ತಂದೆ ನನ್ನನ್ನು ಹಾಗೂ ತಾಯಿಯನ್ನು ಚನ್ನಾಗಿ ನೋಡಿಕೊಳ್ಳುತ್ತಿಲ್ಲ. ತೊಂದರೆ ಕೊಡುತ್ತಾನೆ ಎಂದು ಅಳಲು ತೋಡಿಕೊಂಡಿದ್ದಳು.

ಇದೇ ವಿಚಾರವಾಗಿ ಇಬ್ಬರ ನಡುವೆ ಜಗಳ ಶುರುವುವಾಗಿದ್ದು, ನಡುಬೀದಿಯಲ್ಲಿ ಹೊಡೆದಾಡಿಕೊಳ್ಳುವ ಹಂತ ತಲುಪಿದೆ. ಫಕೇರೇಶನ ಕುತ್ತಿಗೆ, ಮುಖ, ಎದೆಗೆ ಗಂಗಾಧರ್ ಚಾಕುವಿನಿಂದ ಇರಿದಿದ್ದಾನೆ. ಗಾಯಾಳುವನ್ನು ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗದಗ ಶಹರ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Tipy, jak ušetřit Za měsíc budete nepoznateľní: Táto Jak správně prát podprsenku, aby si nesedla Jak snížit hladinu kofeinu v Jak čistit závěsy bez jejich sundání: užitečné tipy pro hostesky Co dělat, když se