alex Certify KSRTC ಯಲ್ಲಿ ಗಾಂಜಾ ತಂದು ಮಾರುತ್ತಿದ್ದ BMTC ಇಬ್ಬರು ನೌಕರರು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

KSRTC ಯಲ್ಲಿ ಗಾಂಜಾ ತಂದು ಮಾರುತ್ತಿದ್ದ BMTC ಇಬ್ಬರು ನೌಕರರು ಅರೆಸ್ಟ್

ಬೆಂಗಳೂರು: ಕೆಎಸ್ಆರ್ಟಿಸಿ ಬಸ್ ಗಳಲ್ಲಿ ಬೆಂಗಳೂರಿಗೆ ಗಾಂಜಾ ತಂದು ಮಾರಾಟ ಮಾಡುತ್ತಿದ್ದ ಬಿಎಂಟಿಸಿ ಇಬ್ಬರನ್ನು ಕೆಂಗೇರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ವಿಜಯಪುರ ಜಿಲ್ಲೆಯ ವಿಠಲ ಭಜಂತ್ರಿ ಮತ್ತು ಶರಣಬಸಪ್ಪ ಬಂಧಿತ ಆರೋಪಿಗಳೆಂದು ಹೇಳಲಾಗಿದ್ದು, ಅವರಿಂದ 9.8 ಕೆಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ.

ವಿಠಲ ಭಜಂತ್ರಿ ಬಿಎಂಟಿಸಿಯಲ್ಲಿ ಚಾಲಕ ಕಂ ನಿರ್ವಾಹಕನಾಗಿದ್ದಾನೆ. ಶರಣಬಸಪ್ಪ ಡಿಪೋ ನೌಕರನಾಗಿದ್ದಾನೆ. ಕೆಂಗೇರಿಯಲ್ಲಿ ಕುಟುಂಬದವರೊಂದಿಗೆ ಇವರು ವಾಸವಾಗಿದ್ದಾರೆ. ಬಿಎಂಟಿಸಿ ನೌಕರರರಾಗಿರುವುದರಿಂದ ಸರ್ಕಾರಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಇದೆ. ಈ ಸೌಲಭ್ಯ ದುರ್ಬಳಕೆ ಮಾಡಿಕೊಂಡ ಇವರು ವಿಜಯಪುರ, ಕಲ್ಬುರ್ಗಿ ಮೊದಲಾದ ಕಡೆಗಳಿಂದ ಗಾಂಜಾ ತಂದು ಮಾರಾಟ ಮಾಡುತ್ತಿದ್ದರು. ಈ ಮಾಹಿತಿ ಆಧರಿಸಿ ತನಿಖೆ ಕೈಗೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...