alex Certify ಗೌರಿ-ಗಣೇಶ ಹಬ್ಬಕ್ಕೆ ಜನಸಾಮಾನ್ಯರಿಗೆ ಶಾಕ್ : ಆಹಾರ ಧಾನ್ಯಗಳ ಬೆಲೆಯಲ್ಲಿ ಭಾರೀ ಏರಿಕೆ! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗೌರಿ-ಗಣೇಶ ಹಬ್ಬಕ್ಕೆ ಜನಸಾಮಾನ್ಯರಿಗೆ ಶಾಕ್ : ಆಹಾರ ಧಾನ್ಯಗಳ ಬೆಲೆಯಲ್ಲಿ ಭಾರೀ ಏರಿಕೆ!

ಬೆಂಗಳೂರು : ಗೌರಿ-ಗಣೇಶ ಹಬ್ಬಕ್ಕೆ ಜನಸಾಮಾನ್ಯರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದ್ದು, ಹೆಸರು, ಉದ್ದು, ಕಡಲೆ, ಗೋಧಿ, ಅಕ್ಕಿ ಸೇರಿದಂತೆ ಹಲವು ಆಹಾರ ಧಾನ್ಯಗಳ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ.

ಮುಂಗಾರು ಮಳೆ ಕೊರತೆಯಿಂದಾಗಿ ಕೃಷಿ ಬೆಳೆಗಳಿಗೆ ಸಂಕಷ್ಟ ಎದುರಾಗಿದ್ದು, ಆಹಾರ ಧಾನ್ಯಗಳ ಬೆಲೆ ಶೇ. 20-30 ರಷ್ಟು ಏರಿಕೆಯಾಗಿದೆ. ತೊಗರಿ ಬೇಳೆ ಕೆಜಿಗೆ 200 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಅಕ್ಕಿ, ಗೋಧಿ ಹಾಗೂ ಬೇಳೆಕಾಳುಗಳು ಶೇ. 20-25 ರಷ್ಟು ಏರಿಕೆಯಾಗಿದೆ. ಮಳೆ ಕೊರತೆಯಿಂದಾಗಿ ಬೆಳೆ ಇಲ್ಲ. ಹೀಗಾಗಿ ಬೇಡಿಕೆ ಹೆಚ್ಚಾಗಿದ್ದು, ಪೂರೈಕೆ ಕಡಿಮೆಯಾಗಿ ಬೆಲೆಗಳು ಏರಿಕೆಯಾಗಿವೆ.

ಇಲ್ಲಿದೆ ಆಹಾರ ಧಾನ್ಯಗಳ ಬೆಲೆಗಳು

ಹೆಸರು ಕಾಳು-120 ರೂ.ನಿಂದ 150 ರೂ.

ತೊಗರಿ-160 ರೂ.ನಿಂದ 170 ರೂ

ಹೆಸರು ಬೇಳೆ-120 ರೂ.ನಿಂದ 150 ರೂ.

ಕಡಲೆಕಾಳು – 80 ರೂ.ನಿಂದ 85 ರೂ.

ಕಾಬೂಲ್ ಚನ್ನಾ -160 ರ.ನಿಂದ 170 ರೂ.

ಬೇಳೆ- 70 ರೂ.ನಿಂದ 80 ರೂ.ವರೆಗೆ ಏರಿಕೆಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...