alex Certify ಗೌತಮ್​ ಅದಾನಿ – ಸಿಎಂ ಮಮತಾ ಬ್ಯಾನರ್ಜಿ ಮಹತ್ವದ ಚರ್ಚೆ: ಕುತೂಹಲ ಮೂಡಿಸಿದೆ ಈ ಭೇಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗೌತಮ್​ ಅದಾನಿ – ಸಿಎಂ ಮಮತಾ ಬ್ಯಾನರ್ಜಿ ಮಹತ್ವದ ಚರ್ಚೆ: ಕುತೂಹಲ ಮೂಡಿಸಿದೆ ಈ ಭೇಟಿ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ ಅದಾನಿ ಗ್ರೂಪ್​ ಸಂಸ್ಥಾಪಕ ಹಾಗೂ ಚೇರ್​ಮನ್​ ಗೌತಮ್​ ಅದಾನಿಯೊಂದಿಗೆ ರಾಜ್ಯ ಸಚಿವಾಲಯದ ನಬನ್ನಾದಲ್ಲಿ ಮಹತ್ವದ ಮಾತುಕತೆ ನಡೆಸಿದರು.

ಮಮತಾ ಬ್ಯಾನರ್ಜಿಯನ್ನು ಭೇಟಿಯಾದ ಬಳಿಕ ಗೌತಮ್​ ಅದಾನಿ ಗೌರವಾನ್ವಿತ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯನ್ನು ಭೇಟಿಯಾಗಿದ್ದರಿಂದ ಸಂತೋಷವಾಗಿದೆ ಎಂದು ಟ್ವೀಟಾಯಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಹೂಡಿಕೆ ಹಾಗೂ ಸಾಮರ್ಥ್ಯಗಳ ಬಗ್ಗೆ ಚರ್ಚೆ ನಡೆಸಲಾಯ್ತು. 2022ರ ಏಪ್ರಿಲ್​ನಲ್ಲಿ ಬಂಗಾಳ ಬಿಸಿನೆಸ್​ ಶೃಂಗಸಭೆಯಲ್ಲಿ ಭಾಗವಹಿಸಲು ಉತ್ಸುಕನಾಗಿದ್ದೇನೆ ಎಂದು ಹೇಳಿದ್ದಾರೆ.

ನಬನ್ನಾದಿಂದ ಬಂದಿರುವ ಮಾಹಿತಿಯ ಪ್ರಕಾರ ಅದಾನಿ ಹಾಗೂ ಮಮತಾ ಒಂದೂವರೆ ಗಂಟೆಗೂ ಹೆಚ್ಚು ಕಾಲ ಪರಸ್ಪರ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಮುಂಬೈನಿಂದ ವಾಪಸ್ಸಾದ ಕೆಲವೇ ಗಂಟೆಗಳಲ್ಲಿ ಮಮತಾ ಬ್ಯಾನರ್ಜಿ ಅದಾನಿಯನ್ನು ಭೇಟಿಯಾಗಲು ನಬನ್ನಾಗೆ ತೆರಳಿದ್ದರು.
ಈ ಸಭೆಯಲ್ಲಿ ತೃಣಮೂಲ ಕಾಂಗ್ರೆಸ್​ ಪ್ರಧಾನ ಕಾರ್ಯದರ್ಶಿ ಅಭಿಷೇಕ್​ ಬ್ಯಾನರ್ಜಿ ಕೂಡ ಹಾಜರಿದ್ದರು ಎಂದು ಉನ್ನತ ಮೂಲಗಳು ಮಾಹಿತಿ ನೀಡಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...