ಪಕ್ಷೇತರ ಅಭ್ಯರ್ಥಿಯಾಗಿ ವಿನಯ್ ಕುಮಾರ್ ಸ್ಪರ್ಧೆ ನಿಶ್ಚಿತ

ದಾವಣಗೆರೆ: ಪಕ್ಷೇತರ ಅಭ್ಯರ್ಥಿಯಾಗಿ ಏಪ್ರಿಲ್ 12ರಂದು ನಾಮಪತ್ರ ಸಲ್ಲಿಸುತ್ತೇನೆ ಎಂದು ಇನ್ ಸೈಟ್ಸ್ ಐಎಎಸ್ ತರಬೇತಿ ಕೇಂದ್ರದ ಸಂಸ್ಥಾಪಕ ಜಿ.ಬಿ. ವಿನಯ್ ಕುಮಾರ್ ತಿಳಿಸಿದ್ದಾರೆ.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಏಪ್ರಿಲ್ 12ರಂದು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.

ನನಗೆ ಜನಬೆಂಬಲ ಇಲ್ಲದಿದ್ದರೆ ನಾನು ಈ ತೀರ್ಮಾನ ಕೈಗೊಳ್ಳುತ್ತಿರಲಿಲ್ಲ. ನಾನು ಯಾವುದೇ ಪಕ್ಷದ ವಿರುದ್ಧ ಬಂಡಾಯ ಸಾರಿಲ್ಲ. ದಾವಣಗೆರೆಯಲ್ಲಿ ಎರಡು ಕುಟುಂಬದ ಬಂಡವಾಳಶಾಹಿಗಳು ಸಾಮ್ರಾಜ್ಯ ಸೃಷ್ಟಿಸಿಕೊಂಡಿದ್ದಾರೆ. ಈ ಕುಟುಂಬಗಳು ತಮ್ಮ ವ್ಯವಹಾರಕ್ಕೆ ಮೊದಲ ಆದ್ಯತೆ ನೀಡಿ ಜನ ಸೇವೆ ಕಡೆಗಣಿಸಿವೆ ಎಂದು ಆರೋಪಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read