ಘಾಜಿಯಾಬಾದ್ನಲ್ಲಿ ಆಘಾತಕಾರಿ ಘಟನೆ ನಡೆದಿದ್ದು, ಪ್ರೇಮ ವಿವಾದಕ್ಕೆ ಸಂಬಂಧಿಸಿದಂತೆ 13 ವರ್ಷದ ಬಾಲಕನನ್ನು ಆತನ ಸ್ನೇಹಿತರೇ ಬರ್ಬರವಾಗಿ ಕೊಲೆ ಮಾಡಿದ್ದಾರೆ. ಮಾರ್ಚ್ 3 ರಂದು ನಡೆದ ಈ ಘಟನೆಗೆ 10 ದಿನಗಳ ಮೊದಲೇ ಸ್ಕೆಚ್ ಹಾಕಲಾಗಿತ್ತು ಎನ್ನಲಾಗಿದೆ.
ಪೊಲೀಸ್ ವರದಿಗಳ ಪ್ರಕಾರ, ಬಾಲಕನನ್ನು ವಿಡಿಯೋ ಮಾಡುವ ನೆಪದಲ್ಲಿ ಸ್ನೇಹಿತರು ಕರೆದುಕೊಂಡು ಹೋಗಿದ್ದಾರೆ. ನಂತರ ಆತನ ರಕ್ತಸಿಕ್ತ ಮೃತದೇಹ ಪಾರ್ಶ್ವನಾಥ್ ಪ್ಯಾರಡೈಸ್ನ ಶಿಥಿಲಗೊಂಡ ಕಟ್ಟಡದ ಒಂಬತ್ತನೇ ಮಹಡಿಯಲ್ಲಿ ಪತ್ತೆಯಾಗಿದೆ.
ಈ ಕೊಲೆಯನ್ನು 10 ದಿನಗಳ ಮೊದಲೇ ಯೋಜಿಸಲಾಗಿತ್ತು ಎಂದು ತನಿಖೆಯಿಂದ ತಿಳಿದುಬಂದಿದೆ. ಆರೋಪಿಗಳಲ್ಲಿ ಒಬ್ಬನಾದ 7 ನೇ ತರಗತಿ ವಿದ್ಯಾರ್ಥಿ ಬಾಲಕನ ಮೇಲೆ ಹಿಂದಿನಿಂದ ಹಲ್ಲೆ ಮಾಡಿದ್ದಾನೆ. 10 ನೇ ತರಗತಿ ವಿದ್ಯಾರ್ಥಿ ಇಟ್ಟಿಗೆಯಿಂದ ಹಲ್ಲೆ ಮಾಡಿದ್ದಾನೆ. 7 ನೇ ತರಗತಿ ವಿದ್ಯಾರ್ಥಿ ನೀಡಿದ ಚಾಕುವಿನಿಂದ ಹೊಟ್ಟೆಗೆ ಇರಿದು, ನಂತರ ಮುಖವನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿದೆ. ಈ ಘಟನೆ ಸ್ಥಳೀಯರಲ್ಲಿ ಆಘಾತವನ್ನುಂಟು ಮಾಡಿದೆ.
ಘಟನೆ ನಡೆದ ನಂತರ, ಇಬ್ಬರು ಅಪ್ರಾಪ್ತ ಶಂಕಿತರನ್ನು ವಶಕ್ಕೆ ತೆಗೆದುಕೊಂಡು ಬಾಲ ನ್ಯಾಯಾಲಯಕ್ಕೆ ಕಳುಹಿಸಲಾಗಿದೆ. ಪೊಲೀಸರು ತಮ್ಮ ತನಿಖೆಯನ್ನು ಮುಂದುವರೆಸಿದ್ದಾರೆ. ಈ ಪ್ರಕರಣವು ಸ್ಥಳೀಯರು ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಆಕ್ರೋಶವನ್ನು ಹುಟ್ಟುಹಾಕಿದೆ.