alex Certify ಜನರ ಸುರಕ್ಷತೆ ದೃಷ್ಟಿಯಿಂದ ಆಕ್ರಮಣಕಾರಿ ತಳಿ ನಾಯಿ ಸಾಕಣೆ ನಿಷೇಧಕ್ಕೆ ಚಿಂತನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜನರ ಸುರಕ್ಷತೆ ದೃಷ್ಟಿಯಿಂದ ಆಕ್ರಮಣಕಾರಿ ತಳಿ ನಾಯಿ ಸಾಕಣೆ ನಿಷೇಧಕ್ಕೆ ಚಿಂತನೆ

ಪಣಜಿ: ಆಕ್ರಮಣಕಾರಿ ತಳಿ ನಾಯಿ ಸಾಕಣೆ ನಿಷೇಧಕ್ಕೆ ಚಿಂತನೆ ನಡೆಸಿದ್ದೇವೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ.

ವಿಶ್ವ ರೇಬಿಸ್ ದಿನದಂದು ಮಾತನಾಡಿದ ಅವರು, ಜನರ ಸುರಕ್ಷತೆ ದೃಷ್ಟಿಯಿಂದ ಕೆಲವು ಆಕ್ರಮಣಕಾರಿ ನಾಯಿಗಳ ತಳಿ ಸಾಕಣೆ ನಿಷೇಧಿಸುವ ಕುರಿತು ಚಿಂತನೆ ನಡೆಸಲಾಗಿದೆ. ಕೆಲವು ತಳಿಗಳ ನಾಯಿಗಳು ತೀರಾ ಆಕ್ರಮಣಕಾರಿಯಾಗಿದ್ದು, ಜನರ ಮೇಲೆ ದಾಳಿ ಮಾಡುತ್ತವೆ. ಇಂತಹ ನಾಯಿಗಳನ್ನು ಕೆಲವರು ಸಾಕುತ್ತಾರೆ. ಆದರೆ, ಲಸಿಕೆ ಹಾಕಿಸುವುದಿಲ್ಲ. ಹೀಗಾಗಿ ಕೆಲವು ಆಕ್ರಮಣಕಾರಿ ತಳಿ ನಾಯಿ ನಿಷೇಧಕ್ಕೆ ಚಿಂತನೆ ನಡೆದಿದೆ ಎಂದು ಮಾಹಿತಿ ನೀಡಿದ್ದಾರೆ.

ಜನರು ತಮ್ಮ ಸಾಕು ನಾಯಿಗಳಿಗೆ ಲಸಿಕೆ ಹಾಕುವಂತೆ ಒತ್ತಾಯಿಸಿದ ಸಾವಂತ್, ಜನರು ಇತರ ರಾಜ್ಯಗಳಿಂದ ನಾಯಿಗಳನ್ನು ತರುವಾಗ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು ಮತ್ತು ನಿಯಮಿತವಾಗಿ ನಾಯಿಗಳಿಗೆ ಲಸಿಕೆ ಹಾಕಬೇಕು ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...