ಬೆಂಗಳೂರು : ಕಾರ್ಮಿಕ ಇಲಾಖೆ ಮತ್ತು ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಸಹಯೋಗದಲ್ಲಿ ರೂಪಿಸಲಾಗಿರುವ 135 ಸಂಚಾರಿ ಚಿಕಿತ್ಸಾಲಯ ಬಸ್ಗಳಿಗೆ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದ್ದಾರೆ.
ಈ ಚಿಕಿತ್ಸಾಲಯಗಳ ಮೂಲಕ ವಾರ್ಷಿಕ 15 ಲಕ್ಷ ಕಾರ್ಮಿಕರಿಗೆ ಚಿಕಿತ್ಸೆ ನೀಡುವ ಗುರಿ ಇದೆ. ಪ್ರತಿ ಜಿಲ್ಲೆಗೆ ಕನಿಷ್ಠ ಮೂರು ಸಂಚಾರಿ ಚಿಕಿತ್ಸಾಲಯಗಳನ್ನು ನಿಯೋಜನೆ ಮಾಡಲಾಗುತ್ತದೆ. ಕೆಲವು ಜಿಲ್ಲೆಗೆ 5–6 ಬಸ್ಗಳು ದೊರೆಯಲಿವೆ. ಕಾರ್ಮಿಕರ ಕಲ್ಯಾಣ ಮಂಡಳಿಗೆ ಸೆಸ್ ನೀಡುತ್ತಿರುವ ನೋಂದಾಯಿತ ಕಾರ್ಮಿಕರೆಲ್ಲರೂ ಈ ಬಸ್ಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳಬಹುದಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ತಿಳಿಸಿದ್ದಾರೆ.