alex Certify ಅಡಿಕೆ ಬೆಳಗಾರರಿಗೆ ನೆಮ್ಮದಿಯ ಸುದ್ದಿ : ಹಳದಿ ಎಲೆ, ಎಲೆ ಚುಕ್ಕೆ ರೋಗ ನಿವಾರಣೆಗೆ ಕ್ರಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಡಿಕೆ ಬೆಳಗಾರರಿಗೆ ನೆಮ್ಮದಿಯ ಸುದ್ದಿ : ಹಳದಿ ಎಲೆ, ಎಲೆ ಚುಕ್ಕೆ ರೋಗ ನಿವಾರಣೆಗೆ ಕ್ರಮ

ಬೆಳಗಾವಿ : ಅಡಿಕೆ ಬೆಳೆಗಾರರಿಗೆ ಕೃಷಿ ಸಚಿವರು ಸಿಹಿಸುದ್ದಿ ನೀಡಿದ್ದು, ಹಳದಿ ಎಲೆ, ಎಲೆ ಚುಕ್ಕೆ ರೋಗ ನಿವಾರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಸಚಿವರು,  ಮಲೆನಾಡು ಹಾಗೂ ಕರಾವಳಿ ಪ್ರದೇಶದಲ್ಲಿನ ಪ್ರಮುಖ ಬೆಳೆಯಾಗಿರುವ ಅಡಿಕೆ ಬೆಳೆಯನ್ನು ಕಾಡುತ್ತಿರುವ ಹಳದಿ ಎಲೆ ಹಾಗೂ ಎಲೆ ಚುಕ್ಕೆ ರೋಗವನ್ನು ನಿವಾರಿಸುವ ಸಲುವಾಗಿ ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಂಡಿದೆ. ಸಂಶೋಧನೆಗಾಗಿ ಈಗಾಗಲೇ ₹ 52 ಲಕ್ಷ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಅಡಿಕೆ ಬೆಳೆಗೆ ತಗಲುತ್ತಿರುವ ಎಲೆ ಚುಕ್ಕೆ ಹಾಗೂ ಹಳದಿ ಎಲೆ ರೋಗ ನಿವಾರಣೆಗಾಗಿ ವಿಶ್ವವಿದ್ಯಾಲಯದ ವಿಜ್ಞಾನಿಗಳು ಸಂಶೋಧನೆ ಕೈಗೊಂಡಿದ್ದಾರೆ. ಈಗಾಗಲೇ ಇದಕ್ಕಾಗಿ ₹ 52 ಲಕ್ಷ ಬಿಡುಗಡೆ ಮಾಡಲಾಗಿದೆ. ಅಗತ್ಯವಿದ್ದಲ್ಲಿ ಹೆಚ್ಚಿನ ಅನುದಾನ ಬಿಡುಗಡೆಗೆ ಸಿದ್ಧ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...