alex Certify ಆರ್ಯ ವೈಶ್ಯ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಶೈಕ್ಷಣಿಕ ಸಾಲ ಪಡೆಯಲು ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆರ್ಯ ವೈಶ್ಯ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಶೈಕ್ಷಣಿಕ ಸಾಲ ಪಡೆಯಲು ಅರ್ಜಿ ಆಹ್ವಾನ

ಶಿವಮೊಗ್ಗ : ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮವು 2023-24ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಆರ್ಯ ವೈಶ್ಯ ಸಮುದಾಯದ ವಿದ್ಯಾರ್ಥಿಗಳಿಂದ ಆನ್ಲೈನ್ ಅರ್ಜಿ ಆಹ್ವಾನಿಸಿದೆ.

ಈ ಯೋಜನೆಯಲ್ಲಿ ಸಿ.ಇ.ಟಿ./ಎನ್.ಇ.ಇ.ಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವೃತ್ತಿಪರ ಕೋರ್ಸ್ ಹಾಗೂ ಪಿ.ಹೆಚ್.ಡಿ. ವ್ಯಾಸಂಗ ಮಾಡುವ ಆರ್ಯ ವೈಶ್ಯ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ. 1.00 ಲಕ್ಷಗಳ ಸಾಲ ಹಾಗೂ ಶೇ. 2ರ ಬಡ್ಡಿದರದಲ್ಲಿ ಶೈಕ್ಷಣಿಕ ಸಾಲ ನೀಡಲಾಗುವುದು. ವ್ಯಾಸಂಗ ಪೂರ್ಣಗೊಂಡ ನಂತರ 4 ತಿಂಗಳ ವಿರಾಮಾವಧಿ ಇದ್ದು, ನಂತರ ಸಾಲವನ್ನು 36 ಮಾಸಿಕ ಕಂತುಗಳಲ್ಲಿ ಮರುಪಾವತಿಸುವುದು. ಅರ್ಜಿದಾರರು 18 ರಿಂದ 35 ವರ್ಷದೊಳಗಿನವರಾಗಿದ್ದು, ಕುಟುಂಬದ ವಾರ್ಷಿಕ ವರಮಾನ ರೂ. 6.00 ಲಕ್ಷಗಳ ಮಿತಿಯೊಳಗಿರಬೇಕು.
ಆಸಕ್ತ ವಿದ್ಯಾರ್ಥಿಗಳು ಆನ್ಲೈನ್ www.kacdc.karnataka.gov.in ರ ಮೂಲಕ ನವೆಂಬರ್ 30 ರೊಳಗಾಗಿ ಅರ್ಜಿ ಸಲ್ಲಿಸುವುದು. ಈ ಯೋಜನೆಯ ಮಾರ್ಗಸೂಚಿ ಹಾಗೂ ಅರ್ಜಿಯನ್ನು ಗೂಗಲ್ನಲ್ಲಿ ಕ್ಯೂಆರ್ ಕೋಡ್ನ್ನು ಸ್ಕ್ಯಾನ್ ಮಾಡಿ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ 9448481111 / 08182-229634 ಅಥವಾ www.kacdc.karnataka.gov.in ವೆಬ್ಸೈಟ್ ಅಥವಾ ಜಿಲ್ಲಾ ಕರ್ನಾಟಕ ಆರ್ಯ ವೈಶ್ಯ ಸಮುದಾಯದ ಅಭಿವೃದ್ಧಿ ನಿಗಮದ ಕಚೇರಿ, ಭಾಗ್ಯ ನಿಲಯ, ಭಂಡಾರಿ ಗ್ಯಾಸ್ ಏಜೆನ್ಸಿ ಹತ್ತಿರ, 1ನೇ ಪ್ಯಾರಲಾಲ್ ರಸ್ತೆ, ಗಾಂಧಿನಗರ, ಶಿವಮೊಗ್ಗ ಇಲ್ಲಿ ಸಂಪರ್ಕಿಸಿ ಪಡೆಯುವುದು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...