alex Certify ʻಬಗರ್ ಹುಕುಂʼ ಸಾಗುವಳಿದಾರರಿಗೆ ಖುಷಿ ಸುದ್ದಿ : ಅರ್ಜಿಗಳ ಶೀಘ್ರ ವಿಲೇವಾರಿಗೆ ʻಬಗರ್ ಹುಕುಂ ಆ್ಯಪ್ʼ ಬಿಡುಗಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ʻಬಗರ್ ಹುಕುಂʼ ಸಾಗುವಳಿದಾರರಿಗೆ ಖುಷಿ ಸುದ್ದಿ : ಅರ್ಜಿಗಳ ಶೀಘ್ರ ವಿಲೇವಾರಿಗೆ ʻಬಗರ್ ಹುಕುಂ ಆ್ಯಪ್ʼ ಬಿಡುಗಡೆ

ಬೆಂಗಳೂರು : ರಾಜ್ಯ ಸರ್ಕಾರವು ಬಗರ್‌ ಹುಕುಂ ಸಾಗುವಳಿದಾರರಿಗೆ ಸಿಹಿಸುದ್ದಿ ನೀಡಿದ್ದು, ಅರ್ಜಿಗಳ ಶೀಘ್ರ ವಿಲೇವಾರಿಗೆ ಬಗರ್‌ ಹುಕುಂ ಆಯಪ್‌ ಬಿಡುಗಡೆ ಮಾಡಲಾಗಿದೆ.

ಸಚಿವ ಕೃಷ್ಣ ಬೈರೇಗೌಡ ಅವರು, ಜಿಲ್ಲಾಧಿಕಾರಿಗಳ ಜೊತೆಗೆ  ವಿಡಿಯೋ ಕಾನ್ಪರೆನ್ಸ್ ಮೂಲಕ ಸಭೆ ನಡೆಸಲಾಯಿತು. ಈ ವೇಳೆ “ಬಗರ್ ಹುಕುಂ ಆ್ಯಪ್‌” ಅನ್ನು ಬಿಡುಗಡೆಮಾಡಲಾಯಿತು. ರೈತರಿಗೆ ಶೀಘ್ರ ಪರಿಹಾರ, ಕಂದಾಯ ಗ್ರಾಮ ಘೋಷಣೆ ಹಾಗೂ ಬಗರ್ ಹುಕುಂ ಅರ್ಜಿಗಳ ಶೀಘ್ರ ವಿಲೇವಾರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಈ ಆಯಪ್‌ ನೆರವಿನಿಂದ ಅಕ್ರಮ ಸಾಗುವಳಿ ಭೂಮಿಯಲ್ಲಿ ಕೃಷಿ ಅಥವಾ ಇತರ ಚಟುವಟಿಕೆ ಬಗ್ಗೆ ಸ್ಯಾಟಲೈಟ್‌ ಚಿತ್ರದ ಮೂಲಕ ಮಾಹಿತಿ ಪಡೆದು ಅರ್ಜಿ ವಿಲೇವಾರಿ ಮಾಡುವುದು ನ್ಯಾಯ-ಸಮ್ಮತವಾಗಲಿದೆ ಎಂದರು.

ನಮೂನೆ 50, 53, 57ರ ಅಕ್ರಮ ಸಕ್ರಮ ಯೋಜನೆಯಡಿ ಸಾವಿರಾರು ಅರ್ಜಿಗಳು ಸಲ್ಲಿಕೆಯಾಗಿವೆ. ಆದರೆ ಕೃಷಿಯೇತರ ಚಟುವಟಿಕೆಗಳಲ್ಲಿ ತೊಡಗಿರುವವರಿಗೆ ಸಾಗುವಳಿ ಚೀಟಿ ನೀಡಲ್ಲ. ಬಗರ್ ಹುಕುಂ ತಂತ್ರಾಶ ಬಳಸಿ ಅರ್ಜಿ ವಿಲೇವಾರಿ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...