alex Certify ಬೆಂಗಳೂರಿಗರಿಗೆ ಗುಡ್ ನ್ಯೂಸ್ : ಇನ್ಮುಂದೆ ಮಧ್ಯರಾತ್ರಿ 1 ಗಂಟೆಯವರೆಗೂ ಅಂಗಡಿ-ಮುಂಗಟ್ಟುಗಳು ಓಪನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿಗರಿಗೆ ಗುಡ್ ನ್ಯೂಸ್ : ಇನ್ಮುಂದೆ ಮಧ್ಯರಾತ್ರಿ 1 ಗಂಟೆಯವರೆಗೂ ಅಂಗಡಿ-ಮುಂಗಟ್ಟುಗಳು ಓಪನ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಧ್ಯರಾತ್ರಿ 1 ಗಂಟೆಯವರೆಗೆ ಅಂಗಡಿಗಳು ಮತ್ತು ಮುಂಗಟ್ಟುಗಳನ್ನು ತೆರೆಯಲು ಅನುಮತಿ ನೀಡಿದ್ದರಿಂದ ನಗರದ ರಾತ್ರಿ ಜೀವನದಲ್ಲಿ ಪ್ರಮುಖ ಬದಲಾವಣೆಗೆ ಸಾಕ್ಷಿಯಾಗಲಿದೆ. ವಿಧಾನಸಭೆಯಲ್ಲಿ ಬಜೆಟ್ ಮಂಡನೆಯ ಸಂದರ್ಭದಲ್ಲಿ ಈ ಘೋಷಣೆ ಮಾಡಲಾಗಿದೆ.

ಬೆಂಗಳೂರು ಮಾತ್ರವಲ್ಲ, ರಾಜ್ಯದ ಇತರ 10 ಕಾರ್ಪೊರೇಷನ್ ಪ್ರದೇಶಗಳಿಗೂ ಈ ನಿಯಮ ಅನ್ವಯವಾಗಲಿದೆ. ಉದ್ಯಮ ಸಂಸ್ಥೆಗಳೊಂದಿಗೆ ದಿನಗಳ ಚರ್ಚೆಯ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬೆಂಗಳೂರು ಮತ್ತು ಇತರ 10 ಕಾರ್ಪೊರೇಷನ್ ಪ್ರದೇಶಗಳಲ್ಲಿ ವ್ಯಾಪಾರ ಮತ್ತು ವಾಣಿಜ್ಯಕ್ಕಾಗಿ ಅಂಗಡಿಗಳು ಮತ್ತು ಸಂಸ್ಥೆಗಳನ್ನು ಮಧ್ಯರಾತ್ರಿ 1 ಗಂಟೆಯವರೆಗೆ ತೆರೆಯಲು ಅವಕಾಶ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಅಂಗಡಿಗಳು ಮತ್ತು ಸಂಸ್ಥೆಗಳ ಸಮಯವನ್ನು ಹೆಚ್ಚುವರಿ ಗಂಟೆಗಳವರೆಗೆ ವಿಸ್ತರಿಸುವ ಮೂಲಕ ಹೆಚ್ಚುವರಿ ತೆರಿಗೆಗಳನ್ನು ಪಡೆಯುವ ಮತ್ತು ಆರ್ಥಿಕತೆಯನ್ನು ಸುಧಾರಿಸುವ ಗುರಿಯನ್ನು ರಾಜ್ಯ ಸರ್ಕಾರ ಹೊಂದಿದೆ.ಸಮಯವನ್ನು ಹೆಚ್ಚಿಸುವುದು ವಿವಿಧ ಹೋಟೆಲ್ ಗಳ ಸಂಘಗಳ ದೀರ್ಘಕಾಲದ ಬೇಡಿಕೆಯಾಗಿತ್ತು .

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...