alex Certify BIG NEWS : ಬ್ರಾಹ್ಮಣ ಸಮುದಾಯಕ್ಕೆ ಗುಡ್ ನ್ಯೂಸ್ : ‘ಸ್ವಾವಲಂಬಿ’ ಯೋಜನೆಯಡಿ 1 ಲಕ್ಷದವರೆಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಬ್ರಾಹ್ಮಣ ಸಮುದಾಯಕ್ಕೆ ಗುಡ್ ನ್ಯೂಸ್ : ‘ಸ್ವಾವಲಂಬಿ’ ಯೋಜನೆಯಡಿ 1 ಲಕ್ಷದವರೆಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು : ಆರ್ಥಿಕವಾಗಿ ಹಿಂದುಳಿದಿರುವ ಬ್ರಾಹ್ಮಣ ಕುಟುಂಬಗಳ ಶ್ರೇಯೋಭಿವೃದ್ದಿಗಾಗಿ ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಸ್ವಾವಲಂಬಿ ಯೋಜನೆಯಡಿ 1 ಲಕ್ಷದವರೆಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಿದೆ.

ಅರ್ಜಿದಾರರ ಗಮನಕ್ಕೆ

1. ಸದರಿ ಯೋಜನೆಯಡಿ ಬ್ರಾಹ್ಮಣ ಸಮುದಾಯದವರಿಗೆ ಸ್ವಯಂ ಉದ್ಯೋಗಕ್ಕೆ ವ್ಯಾಪಾರ, ಅಂಗಡಿ, ಹೈನುಗಾರಿಕೆ, ಹೊಲಿಗೆ ವೃತ್ತಿ, ಆಟಿಕೆ ತಯಾರಿಕೆ, ಮೊಬೈಲ್ ಅಂಗಡಿ, ಗೃಹ/ ಗುಡಿ ಕೈಗಾರಿಕೆ ಇತ್ಯಾದಿ ಆದಾಯ ಬರುವಂತಹ ಲಾಭದಾಯಕ ಉದ್ಯಮಗಳನ್ನು ಸ್ಥಾಪಿಸಲು ಪಡೆದ ಸಾಲಕ್ಕೆ ಸಹಾಯ ಧನ ನೀಡಲಾಗುವುದು.

2. ಯಾವುದೇ ರಾಷ್ಟ್ರೀಕೃತ ಬ್ಯಾಂಕ್ ನಿಂದ 2023-24 ನೇ ಸಾಲಿನಲ್ಲಿ ಸ್ವಯಂ ಉದ್ಯೋಗಕ್ಕಾಗಿ ಸಾಲವನ್ನು ಪಡೆದಿರಬೇಕು.

3. ಈ ಅರ್ಜಿಯನ್ನು ಸಂಪೂರ್ಣವಾಗಿ ಭರ್ತಿ ಮಾಡಿ ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸುವುದು.

4. ಸದರಿ ಸಹಾಯಧನಕ್ಕಾಗಿ ಸಲ್ಲಿಸಲಾಗುವ ಅರ್ಜಿಯನ್ನು, ಸಾಲ ಪಡೆದ ಬ್ಯಾಂಕ್ ನಿಂದ ದೃಢೀಕರಣಗೊಳಿಸಿ ಮಂಡಳಿಗೆ ಸಲ್ಲಿಸುವುದು.

ಭರ್ತಿ ಮಾಡಿದ ಅರ್ಜಿಯನ್ನು ಅಧ್ಯಕ್ಷರು/ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ, 14/3, ಅನೆಕ್ಸ್ ಕಟ್ಟಡ, 3ನೇ ಮಹಡಿ, ಶ್ರೀ ಅರವಿಂದ ಭವನ, ದಿ ಮಿಥಿಕ್ ಸೊಸೈಟಿ ಆವರಣ, ನೃಪತುಂಗ ರಸ್ತೆ, ಬೆಂಗಳೂರು-01 ಇಲ್ಲಿದೆ ಕಳುಹಿಸಿಕೊಡಬಹುದಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...