alex Certify ಪ್ರಯಾಣಿಕರಿಗೆ ಗುಡ್ ನ್ಯೂಸ್ : ಶಿವರಾತ್ರಿ ಹಬ್ಬದ ಪ್ರಯುಕ್ತ ಹೆಚ್ಚುವರಿ ಸಾರಿಗೆ ಬಸ್ ಸಂಚಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಯಾಣಿಕರಿಗೆ ಗುಡ್ ನ್ಯೂಸ್ : ಶಿವರಾತ್ರಿ ಹಬ್ಬದ ಪ್ರಯುಕ್ತ ಹೆಚ್ಚುವರಿ ಸಾರಿಗೆ ಬಸ್ ಸಂಚಾರ

ಹಾವೇರಿ : ಶಿವರಾತ್ರಿ ಹಬ್ಬದ ಪ್ರಯುಕ್ತ ಫೆ.8 ಹಾಗೂ ವಾರಾಂತ್ಯದ ರಜೆ ಪ್ರಯುಕ್ತ ಬೆಂಗಳೂರು ಮತ್ತು ಇತರೇ ಪ್ರಮುಖ ಸ್ಥಳಗಳಿಂದ ಹೆಚ್ಚಿನ ಪ್ರಯಾಣಿಕರು ಹಬ್ಬಕ್ಕಾಗಿ ತಮ್ಮ ಸ್ವಂತ ಊರುಗಳಿಗೆ ತೆರಳುವುದರಿಂದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯಾಪ್ತಿಯ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ ಮತ್ತು ಬಾಗಲಕೋಟೆ ವಿಭಾಗಗಳಿಂದ ಹಬ್ಬದ ಅವಧಿಯಲ್ಲಿ ಸುಮಾರು 110 ವಿಶೇಷ ಹೆಚ್ಚುವರಿ ಸಾರಿಗೆಗಳನ್ನು ಕಾರ್ಯಾಚರಣೆಗೊಳಿಸಲಾಗುತ್ತಿದೆ.

ಹಬ್ಬ ಮುಗಿದ ಮೇಲೆ ದಿನಾಂಕ 10-03-2024 ರಂದು ಮತ್ತು ನಂತರದ ದಿನಗಳಂದು ಪ್ರಮುಖ ಸ್ಥಳಗಳಿಂದ ಜನದಟ್ಟಣೆಗೆ ಅನುಗುಣವಾಗಿ ಹೆಚ್ಚುವರಿ ಸಾರಿಗೆಗಳನ್ನು ಕಾರ್ಯಾಚರಣೆಗೊಳಿಸಲಾಗುವುದು. ಸಾರ್ವಜನಿಕರು ವಿಶೇಷ ಹೆಚ್ಚುವರಿ ಸಾರಿಗೆಗಳ ಸದುಪಯೋಗ ಪಡೆದುಕೊಳ್ಳುವಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...