ಬೆಂಗಳೂರು : ಕಟ್ಟಡ ಕಾರ್ಮಿಕರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದ್ದು, ಕೆಲಸದ ಅವಧಿ ಮತ್ತೆ 8 ಗಂಟೆಗೆ ಇಳಿಸಲು ನಿರ್ಧಾರ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಕಾರ್ಮಿಕರಿಗೆ 12 ಗಂಟೆ ಇರುವ ಕೆಲಸದ ಅವಧಿಯನ್ನು ಮೊದಲಿನಂತೆ 8 ಗಂಟೆಗೆ ಸೀಮಿತ ಮಾಡಬೇಕು ಎನ್ನುವ ಒತ್ತಾಯವನ್ನು ಪರಿಶೀಲನೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
“ದಿನಕ್ಕೆ 12 ಗಂಟೆ ಕೆಲಸ ಮಾಡಬೇಕೆಂಬ ‘ಕಾರ್ಖಾನೆಗಳ (ಕರ್ನಾಟಕ ತಿದ್ದುಪಡಿ) ಕಾಯ್ದೆ 2023’ ಅನ್ನು ತಿದ್ದುಪಡಿ ಮಾಡಿ, ಈ ಮೊದಲಿನಂತೆ 8 ಗಂಟೆಗೆಇಳಿಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.