alex Certify ರಾಜ್ಯದ ಡಿಪ್ಲೋಮಾ,ಪದವೀಧರರಿಗೆ ಗುಡ್ ನ್ಯೂಸ್ : ಜನವರಿಯಿಂದ `ಯುವನಿಧಿ ಯೋಜನೆ’ ಜಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಡಿಪ್ಲೋಮಾ,ಪದವೀಧರರಿಗೆ ಗುಡ್ ನ್ಯೂಸ್ : ಜನವರಿಯಿಂದ `ಯುವನಿಧಿ ಯೋಜನೆ’ ಜಾರಿ

ಬೆಂಗಳೂರು :  ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಯುವನಿಧಿ ಯೋಜನೆಯನ್ನು ಜನವರಿಯಿಂದ ಜಾರಿ ಮಾಡಲು ರಾಜ್ಯ ಸರ್ಕಾರವು ಸಿದ್ಧತೆ ನಡೆಸಿದ್ದು, ಈ ಮೂಲಕ ಡಿಪ್ಲೋಮಾ, ಪದವೀಧರರಿಗೆ ಸಿಹಿಸುದ್ದಿ ನೀಡಿದೆ.

ಈ ಕುರಿತು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದು, ಶಿಕ್ಷಣ ಪೂರ್ತಿಗೊಳಿಸಿದ ಪದವೀಧರ ಯುವಜನರಿಗೆ ಉದ್ಯೋಗ ಹುಡುಕಿಕೊಳ್ಳಲು ಅಗತ್ಯ ಸಮಯ ದೊರಕಬೇಕು ಮತ್ತು ಈ ಅವಧಿಯಲ್ಲಿ ಅವರು ಹತಾಶೆ, ಒತ್ತಡಗಳಿಗೆ ಒಳಗಾಗದೆ ತಮ್ಮಿಷ್ಟದ ಉದ್ಯೋಗವನ್ನು ಆಯ್ಕೆ ಮಾಡಿಕೊಳ್ಳಲು ಸಾಕಷ್ಟು ಅವಕಾಶ ಸಿಗಬೇಕು. ಇದು ಸಾಧ್ಯವಾಗಬೇಕಾದರೆ ನಿರುದ್ಯೋಗದಿಂದ ಎದುರಾಗುವ ಆರ್ಥಿಕ ಸಮಸ್ಯೆಗಳು ಅವರನ್ನು ಬಾಧಿಸದಂತೆ ತಡೆಯಬೇಕು. ಈ ಕಾರಣಕ್ಕಾಗಿ ನಾವು ಪದವೀಧರ ಮತ್ತು ಡಿಪ್ಲೊಮಾ ಪದವೀಧರ ನಿರುದ್ಯೋಗಿಗಳಿಗೆ ಮಾಸಿಕ ನಿರುದ್ಯೋಗ ಭತ್ಯೆ ಒದಗಿಸುವ ಯುವನಿಧಿ ಯೋಜನೆಗೆ ಸರ್ಕಾರ ಜಾರಿಗೆ ಬಂದ ನಂತರದ ಮೊದಲ ಸಂಪುಟ ಸಭೆಯಲ್ಲಿಯೇ ಆಡಳಿತಾತ್ಮಕ  ಅನುಮೋದನೆ ನೀಡಿದ್ದೇವೆ. ಈ ಯೋಜನೆ ಜನವರಿಯಿಂದ ಜಾರಿಗೆ ಬರಲಿದ್ದು, ಸುಮಾರು ನಾಲ್ಕೂವರೆ ಲಕ್ಷ ಯುವಜನತೆಗೆ ನೆರವಾಗಲಿದೆ ಎಂದು ಅಂದಾಜಿಸಲಾಗಿದೆ ಎಂದು ಹೇಳಿದ್ದಾರೆ.

ಕಳೆದ  6 ತಿಂಗಳ ಅವಧಿಯಲ್ಲಿ ನಾಡಿನ ಜನತೆಗೆ ನೀಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ. ಗ್ಯಾರಂಟಿ ಯೋಜನೆಗಳು ಸೇರಿದಂತೆ ಎಲ್ಲ ಅಭಿವೃದ್ಧಿ ಕಾರ್ಯಕ್ರಮಗಳ ಜಾರಿ ಮತ್ತು ಸಮಾಜದ ಶಾಂತಿ-ಸಾಮರಸ್ಯದ ರಕ್ಷಣೆ  ನಮ್ಮ ಸರ್ಕಾರದ ಪ್ರಮುಖ ಉದ್ದೇಶವಾಗಿದೆ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...