alex Certify ರೈತರಿಗೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

ಶಿವಮೊಗ್ಗ : ಶಿಕಾರಿಪುರ ತೋಟಗಾರಿಕೆ ಇಲಾಖೆಯು 2023-24ನೇ ಸಾಲಿನ ತೋಟಗಾರಿಕೆ ಯಾಂತ್ರೀಕರಣ ಕಾರ್ಯಕ್ರಮದಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಸಣ್ಣ ಮತ್ತು ಅತಿ ಸಣ್ಣ ರೈತರು ಹಾಗೂ ಮಹಿಳಾ ಫಲಾನುಭವಿಗಳಿಗೆ ಶೇ.50 ರಷ್ಟು ಹಾಗೂ ಸಾಮಾನ್ಯ ವರ್ಗದ ರೈತರಿಗೆ ಶೇ.40 ರಷ್ಟು ಅಡಿಕೆ ಸಿಪ್ಪೆ ಸುಲಿಯುವ ಯಂತ್ರ, ಕಳೆಕೊಚ್ಚುವ ಯಂತ್ರ, ಗೊರಬಲು ಮಿಷನ್ ಮತ್ತು ಇತರೆ ತೋಟಗಾರಿಕೆ ಯಂತ್ರೋಪಕರಣಗಳಿಗೆ ಸಹಾಯಧನ ವಿತರಿಸಲು ಹಾಗೂ ತೋಟಗಾರಿಕೆ ಅಭಿವೃದ್ಧಿ ಯೋಜನೆಯ ವಿನೂತನ ತಂತ್ರಜ್ಞಾನ ಕಾರ್ಯಕ್ರಮದಡಿ ಅಡಿಕೆ ದೋಟಿ ಹಾಗೂ ಸೋಲಾರ ಪಂಪ್ಸೆಟ್ ಘಟಕಗಳಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ರೈತರು ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಇಲಾಖೆಯಿಂದ ನಿಗದಿತ ನಮೂನೆ ಅರ್ಜಿಯನ್ನು ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸೆ. 22 ರೊಳಗಾಗಿ ಸಲ್ಲಿಸುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.ಹೆಚ್ಚಿನ ಮಾಹಿತಿಗಾಗಿ ಶಿಕಾರಿಪುರ ತೋಟಗಾರಿಕೆ ಇಲಾಖೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ಹೊರಡಿಸಲಾಗಿದೆ.

ಮತ್ಸ್ಯ ಸಂಪದ ಯೋಜನೆಯಡಿ ವಿವಿಧ ಘಟಕಗಳಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಶಿವಮೊಗ್ಗ: ಶಿವಮೊಗ್ಗ ಮೀನುಗಾರಿಕೆ ಇಲಾಖೆ ವತಿಯಿಂದ 2023+24ನೇ ಸಾಲಿನ ಪ್ರಧಾನ ಮಂತ್ರಿ ಮತ್ಸ್ಯಸಂಪದ ಯೋಜನೆಯಡಿ ವಿವಿಧ ಘಟಕಗಳಿಗೆ ಸಹಾಯಧನಕ್ಕಾಗಿ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಮೀನುಕೃಷಿ ಕೊಳಗಳ ನಿರ್ಮಾಣ, ಮೀನುಕೃಷಿ ಕೊಳಗಳ ನಿರ್ಮಾಣ ಮಾಡಿಕೊಂಡು ಮೀನುಕೃಷಿ ಮಾಡುವವರಿಗೆ ಹೂಡಿಕೆ ವೆಚ್ಚದ ಮೇಲೆ ಸಹಾಯಧನ, ಮೀನುಕೃಷಿಗಾಗಿ ಬಯೋಪ್ಲಾಕ್ ಘಟಕ ನಿರ್ಮಾಣಕ್ಕೆ ಸಹಾಯ, ಮೀನು ಮಾರಾಟಕ್ಕಾಗಿ ರೆಫ್ರಿಜಿರೇಟೆಡ್ ವಾಹನ ಖರೀದಿಗೆ ಸಹಾಯ ಮತ್ತು ಯಾಂತ್ರೀಕೃತ ದೋಣಿ ಖರೀದಿಗೆ ಸಹಾಯಧನ ಘಟಕಗಳ ಉಪಯೋಜನೆಯಗಳನ್ನು ಪಡೆಯಲು ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಶೇ.40 ರಷ್ಟು ಹಾಗೂ ಪ.ಜಾ/ಪ.ಪಂ. ಮತ್ತು ಮಹಿಳಾ ಫಲಾನುಭವಿಗಳಿಗೆ ಶೇ.60 ರಷ್ಟು ಸಹಾಯಧನ ನೀಡಲಾಗುವುದು.

ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಆಯಾ ತಾಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸೆ.25 ರೊಳಗಾಗಿ ಸಲ್ಲಿಸುವಂತೆ ಮೀನುಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...