alex Certify ರಾಜ್ಯದ ರೈತ ಸಮುದಾಯಕ್ಕೆ ಗುಡ್ ನ್ಯೂಸ್ : ಶೀಘ್ರವೇ `ಉಚಿತ ಮೇವು ಕಿಟ್’ ವಿತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ರೈತ ಸಮುದಾಯಕ್ಕೆ ಗುಡ್ ನ್ಯೂಸ್ : ಶೀಘ್ರವೇ `ಉಚಿತ ಮೇವು ಕಿಟ್’ ವಿತರಣೆ

ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಜಾನುವಾರುಗಳಿಗೆ ಉಚಿತವಾಗಿ  ಮೇವು ಕಿಟ್ ವಿತರಿಸಿ ಮೇವು ಉತ್ಪಾದನೆಗೆ ಕ್ರಮ ವಹಿಸಲಾಗುವುದು ಎಂದು ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾನುವಾರು ಮೇವು ಕೊರತೆಯಾಗದಂತೆ ತಡೆಯಲು ರಾಜ್ಯ ಸರ್ಕಾರವು ಈಗಾಗಲೇ 20 ಕೋಟಿ ರೂ. ಗಳನ್ನು ಪಶುಪಾಲನಾ ಇಲಾಖೆಗೆ ಬಿಡುಗಡೆ ಮಾಡಿದೆ. ಉಚಿತವಾಗಿ ಮೇವು ಕಿಟ್ ವಿತರಿಸಿ ಮೇವು ಉತ್ಪಾದನೆಗೆ ಕ್ರಮ ವಹಿಸಲಾಗುವುದು ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಈಗಾಗಲೇ 195 ತಾಲೂಕುಗಳನ್ನು ಬರಪೀಡಿತವೆಂದು ಘೋಷಣೆ ಮಾಡಲಾಗಿದ್ದು, ಮತ್ತೆ 15 ತಾಲೂಕುಗಳನ್ನು ಬರಪೀಡಿತವೆಂದು ಘೋಷಣೆ ಮಾಡಲಾಗುವುದು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...