alex Certify ನರೇಗಾ ಕೂಲಿ ಕಾರ್ಮಿಕರಿಗೆ ಗುಡ್ ನ್ಯೂಸ್ : ಬರಪೀಡಿತ ತಾಲೂಕುಗಳಲ್ಲಿ 150 ದಿನಗಳ ಉದ್ಯೋಗ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನರೇಗಾ ಕೂಲಿ ಕಾರ್ಮಿಕರಿಗೆ ಗುಡ್ ನ್ಯೂಸ್ : ಬರಪೀಡಿತ ತಾಲೂಕುಗಳಲ್ಲಿ 150 ದಿನಗಳ ಉದ್ಯೋಗ

ಬೆಂಗಳೂರು : ರಾಜ್ಯ ಸರ್ಕಾರವು ಈಗಾಗಲೇ ಬರಪೀಡಿತ ತಾಲೂಕುಗಳನ್ನು ಘೋಷಣೆ ಮಾಡಿದ್ದು, ಬರಪೀಡಿತ ತಾಲೂಕುಗಳಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕಾಮಗಾರಿ ನಿರ್ವಹಿಸಲು ಅವಕಾಶ ನೀಡಲಾಗಿದೆ.

ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಆಧಿನಿಯಮದ ವಿಧಿ 3(4) ರಡಿ ನೀಡಿದ ಅಧಿಕಾರದನ್ವಯ 2022-2023 ರ ಮಾಸ್ಟರ್ ಸುತ್ತೋಲೆಯ ಅಧ್ಯಾಯ 4.2.3 ರ ಅನ್ವಯ ಬರಪೀಡಿತ ತಾಲೂಕುಗಳಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಒಂದು ಕುಟುಂಬಕ್ಕೆ ಹೆಚ್ಚುವರಿಯಾಗಿ 50 ದಿನಗಳ ಅಂದರೆ ಒಟ್ಟು 150 ದಿನಗಳ ಉದ್ಯೋಗ ಒದಗಿಸಲು ಅವಕಾಶವಿದೆ. ಸಾರ್ವಜನಿಕರು ಇದರ ಲಾಭ ಪಡೆದುಕೊಳ್ಳಬಹುದಾಗಿದೆ.

ಯೋಜನೆಯಡಿ ಅನುಮತಿಸಿದ ಸಾರ್ವಜನಿಕ ಮತ್ತು ವೈಯಕ್ತಿಕ ಕಾಮಗಾರಿಗಳನ್ನು ನಿರ್ವಹಿಸಲು ಅವಕಾಶವಿದ್ದು, ವೈಯಕ್ತಿಕ ಕಾಮಗಾರಿಗಳಲ್ಲಿ ಉದಾಹರಣೆಗೆ ಮುಖ್ಯವಾಗಿ ದನದ ಕೊಟ್ಟಿಗೆ, ಕುರಿ, ಕೋಳಿ, ಹಂದಿ ಶೆಡ್‌ಗಳು, ಎರೆಹುಳು ತೊಟ್ಟಿ, ವಸತಿ ಯೋಜನೆಯಡಿ ಮಂಜೂರಾದ ಮನೆಗಳ ನಿರ್ಮಾಣ, ಮೀನು ಒಣಗಿಸುವ ಕಣ, ಕೃಷಿ ಹೊಂಡ, ಕೃಷಿ ಬಾವಿ ಮತ್ತು ಕೃಷಿ ಜಮೀನಿಗೆ ಸಂಬಧಿಸಿದ ಇತರೆ ಕಾಮಾಗಾರಿಗಳು, ಇಂಗು ಗುಂಡಿ ನಿರ್ಮಾಣ ಹಾಗೂ ತೋಟಗಾರಿಕಾ ಕಾಮಗಾರಿಗಳಾದ ಅಡಿಕೆ ತೋಟ ನಿರ್ಮಾಣ, ಪೌಷ್ಟಿಕ ತೋಟ ಮತ್ತು ಮುಂತಾದ ಕಾಮಗಾರಿಗಳನ್ನು ನಿರ್ವಹಿಸಲು ಅವಕಾಶವಿರುತ್ತದೆ.

  ಸಾರ್ವಜನಿಕರು ಯೋಜನೆಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಮತ್ತು ಯೋಜನೆಯಡಿ ಕೆಲಸ ಪಡೆಯಲು ಸಮೀಪದ ಗ್ರಾಮ ಪಂಚಾಯತಿ ಕಚೇರಿಯನ್ನು ಸಂಪರ್ಕಿಸಿ, ರೈತರು ಹಾಗೂ ಸಾರ್ವಜನಿಕರು  ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...