BIG NEWS : ತಾ.ಪಂ ನೌಕರರಿಗೆ ಗುಡ್ ನ್ಯೂಸ್ : ವೇತನ ಪಾವತಿಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ ಅನುದಾನ ಬಿಡುಗಡೆ

ಬೆಂಗಳೂರು : ತಾ.ಪಂ ನೌಕರರಿಗೆ ಗುಡ್ ನ್ಯೂಸ್ ಎಂಬಂತೆ ವೇತನ ಪಾವತಿಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಲಾಗಿದೆ.

ವಿವಿಧ ತಾಲ್ಲೂಕು ಪಂಚಾಯಿತಿಗಳ ಹಾಗೂ ಅವುಗಳ ವ್ಯಾಪ್ತಿಯ ಇಲಾಖೆಗಳಲ್ಲಿ ಬಾಕಿ/ಪ್ರಸಕ್ತ ಸಾಲಿನ ವೇತನ ವೆಚ್ಚಕ್ಕಾಗಿ, ದಿನಗೂಲಿ ನೌಕರರ ವೇತನ ಹಾಗೂ ಹೊರಗುತ್ತಿಗೆ ನೌಕರರ ವೇತನ ಪಾವತಿಗಾಗಿ ಒಟ್ಟು ರೂ.959.91ಲಕ್ಷಗಳನ್ನು ಬಿಡುಗಡೆಗೊಳಿಸಲು ಪ್ರಸ್ತಾಪಿಸಿದೆ. ಪ್ರಸ್ತಾವನೆಯನ್ನು ಪರಿಶೀಲಿಸಿ ತಾಲ್ಲೂಕ ಪಂಚಾಯತ್ ಕಾರ್ಯಕ್ರಮದಡಿ ರೂ.959.91ಲಕ್ಷಗಳನ್ನು ಲೆಕ್ಕ ಶೀರ್ಷಿಕೆ 2515-00-197-1-10- 300ರಿಂದ ಬಿಡುಗಡೆಗೊಳಿಸಲು ನಿರ್ಣಯಿಸಿ ಈ ಕೆಳಕಂಡಂತೆ ಆದೇಶಿಸಿದೆ.

ಪ್ರಸ್ತಾವನೆಯಲ್ಲಿ ವಿವರಿಸಿರುವಂತೆ ಈ ಆದೇಶಕ್ಕೆ ಲಗತ್ತಿಸಿರುವ ಅನುಬಂಧದ ಕಾಲಂ 2ರ ತಾಲ್ಲೂಕು ಪಂಚಾಯತಿಗೆ ಕಾಲಂ 3 ಕಾರ್ಯಕ್ರಮದಡಿ ಬಾಕಿ/ಪ್ರಸಕ್ತ ಸಾಲಿನ ವೇತನ ವೆಚ್ಚಕ್ಕಾಗಿ, ದಿನಗೂಲಿ ನೌಕರರ ಹಾಗೂ ಹೊರಗುತ್ತಿಗೆ ನೌಕರರ ವೇತನ ಪಾವತಿಗಾಗಿ ಅಗತ್ಯವಿರುವ ಅನುದಾನವನ್ನು ಕಾಲಂ 4ರ ಲೆಕ್ಕ ಶೀರ್ಷಿಕೆಯಡಿ ರೂ.959.91ಲಕ್ಷ (ರೂಪಾಯಿ ಒಂಬತ್ತು ನೂರ ಐವತ್ತೊಂಬತ್ತು ಲಕ್ಷದ ತೊಂಬತ್ತೊಂದು ಸಾವಿರ ಮಾತ್ರ) ಬಿಡುಗಡೆಗೊಳಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read