alex Certify ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ ; ‘ಮೈತ್ರಿ’ ತರಬೇತಿಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ ; ‘ಮೈತ್ರಿ’ ತರಬೇತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಕೇಂದ್ರ ಸರ್ಕಾರ ಪುರಸ್ತ್ರತ ರಾಷ್ಟ್ರೀಯ ಗೋಕುಲ್ ಮಿಷನ್ ಯೋಜನೆಯಡಿ ಸ್ಥಳೀಯ ಮೈತ್ರಿ ಕೇಂದ್ರ / ಮೈತ್ರಿ ಹಳ್ಳಿಯ ನಿರುದ್ಯೋಗಿ ಯುವಕ/ ಯುವತಿಯರಿಗೆ ಸ್ವಯಂ ಉದ್ಯೋಗವಕಾಶ ಕಲ್ಪಸಿ ಕೊಡುವ ನಿಟ್ಟಿನಲ್ಲಿ ಆಸಕ್ತರಿಂದ ಮೈತ್ರಿ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಯ್ಕೆಯಾದ ಆಭ್ಯರ್ಥಿಗಳಿಗೆ 1 ತಿಂಗಳ ಕ್ಲಾಸ್ ರೂಮ್ ಭೋದನಾ ತರಬೇತಿ ಕೇಂದ್ರದಲ್ಲಿ ಹಾಗೂ 2 ತಿಂಗಳ ಪ್ರಾಯೋಗಿಕಾ ತರಬೇತಿಯನ್ನು ಇಲಾಖೆಯ ಪಶು ಆಸ್ಪತ್ರೆ/ ಪಶು ಚಿಕಿತ್ಸಲಾಯಗಳಲ್ಲಿ ನೀಡಲಾಗುವುದು. ತರಬೇತಿ ಅವಧಿಯಲ್ಲಿ ಮತ್ತು ನಂತರ ನಿರ್ವಹಿಸುವ ಕೆಲಸಕ್ಕೆ ಅನುಗುಣವಾಗಿ ಪ್ರೋತ್ಸಾಹ ಧನ ನೀಡಲಾಗುವುದು.
ಅರ್ಜಿ ಸಲ್ಲಿಸುವ ಆಸಕ್ತ ಅಭ್ಯರ್ಥಿಗಳು ಕಡ್ಡಾಯವಾಗಿ ಸ್ಥಳೀಯ ಅಭ್ಯರ್ಥಿಯಾಗಿದ್ದು, ಕನಿಷ್ಟ ಎಸ್.ಎಸ್,ಎಲ್.ಸಿ ತೇರ್ಗಡೆ ಹೊಂದಿರಬೇಕು. ಮೈತ್ರಿ ತರಬೇತಿ ಪಡೆದ ನಂತರ ಸ್ಥಳೀಯವಾಗಿ ಪಾರ್ಯನಿರ್ವಹಿಸಲು ಆಸಕ್ತರಾಗಿರಬೇಕು. ಮೈತ್ರಿ ಕೇಂದ್ರದ ವ್ಯಾಪ್ತಿಯ ಹಳ್ಳಿಗಳಲ್ಲಿ ಇಲಾಖೆಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಕೃತಕ ಗರ್ಭಧಾರಣ ಕಾರ್ಯನಿರ್ವಹಿಸುವುದು. ಇದಕ್ಕೆ ಸರ್ಕಾರದಿಂದ ಪ್ರೋತ್ಸಾಹ ಧನ ನೀಡಲಾಗುವುದು.

ಆಸಕ್ತ ಅಭ್ಯರ್ಥಿಗಳು ತರಬೇತಿಯನ್ನು ಪಡೆಯಲು ಇಚ್ಛಿಸಿರುವ ಬಗ್ಗೆ ನಿಗಧಿತ ನಮೂನೆಯಲ್ಲಿ ಅರ್ಜಿ, ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ಬುಕ್ ಜೆರಾಕ್ಸ್ ಪ್ರತಿ, 2 ಪಾಸ್ ಪೋರ್ಟ್ ಸೈಜ್ ಪೋಟೋ, ಜಾತಿ ಪ್ರಮಾಣ ಪತ್ರ, ರೂ.100 ರ ಇ-ಸ್ಟಾಂಪ್ ಪೇಪರ್ನಲ್ಲಿ ಅಫಿಡಬಿಟ್, ದೂರವಾಣಿ ಸಂಖ್ಯೆ ದಾಖಲಾತಿ ವಿವರ ಸಲ್ಲಿಸುವಂತೆ ಪಶುಪಾಲನಾ ಇಲಾಖೆ ಉಪ ನಿರ್ದೇಶಕ ಡಾ. ಶಿವಯೋಗಿ ಬಿ. ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ಮುಖ್ಯ ಪಶು ವೈದ್ಯಾಧಿಕಾರಿಗಳು, ಪಶು ಆಸ್ಪತ್ರೆ/ ಉಪ ನಿರ್ದೇಶಕರ ಕಛೇರಿ ಪಶುಪಾಲನಾ ಇಲಾಖೆಗಳನ್ನು ಸಂಪರ್ಕಿಸುವುದು.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...