alex Certify BIG NEWS: ಬಿಜೆಪಿ ಸೇರ್ಪಡೆಗೊಂಡರೆ ಸಿಬಿಐ – ಇಡಿ ಕೇಸ್ ಕ್ಲೋಸ್ ಮಾಡುವ ಆಫರ್; ಮನೀಶ್ ಸಿಸೋಡಿಯ ಸ್ಪೋಟಕ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಜೆಪಿ ಸೇರ್ಪಡೆಗೊಂಡರೆ ಸಿಬಿಐ – ಇಡಿ ಕೇಸ್ ಕ್ಲೋಸ್ ಮಾಡುವ ಆಫರ್; ಮನೀಶ್ ಸಿಸೋಡಿಯ ಸ್ಪೋಟಕ ಹೇಳಿಕೆ

ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಕಚೇರಿ ಹಾಗೂ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದು, ಬಂಧನದ ಭೀತಿ ಎದುರಿಸುತ್ತಿದ್ದಾರೆ.

ಇದರ ಮಧ್ಯೆ ಸಾಮಾಜಿಕ ಜಾಲತಾಣ ಟ್ವಿಟರ್ ಮೂಲಕ ಸ್ಪೋಟಕ ಮಾಹಿತಿಯೊಂದನ್ನು ಅವರು ಹಂಚಿಕೊಂಡಿದ್ದು, ಬಿಜೆಪಿ ಸೇರ್ಪಡೆಗೊಂಡರೆ ಸಿಬಿಐ ಹಾಗೂ ಜಾರಿ ನಿರ್ದೇಶನಾಲಯದ ಪ್ರಕರಣಗಳನ್ನು ಕ್ಲೋಸ್ ಮಾಡಲಾಗುತ್ತದೆ ಎಂಬ ಆಫರ್ ತಮಗೆ ನೀಡಲಾಗಿತ್ತು ಎಂದಿದ್ದಾರೆ.

ಆದರೆ ಯಾವುದೇ ಕಾರಣಕ್ಕೂ ತಾವು ಬಿಜೆಪಿ ಸೇರ್ಪಡೆಗೊಳ್ಳುವುದಿಲ್ಲ. ನನ್ನ ವಿರುದ್ಧ ದಾಖಲಾಗಿರುವ ಪ್ರಕರಣಗಳು ಸುಳ್ಳು ಎಂದಿರುವ ಅವರು, ನನ್ನ ತಲೆ ಕತ್ತರಿಸಿಕೊಳ್ಳಲು ಸಿದ್ಧನಿದ್ದೇನೆ ಹೊರತು ಭ್ರಷ್ಟರ ಜೊತೆ ಕೈಜೋಡಿಸುವುದಿಲ್ಲ ಎಂದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...