alex Certify BIG NEWS : ಸಾರ್ವಜನಿಕರ ಗಮನಕ್ಕೆ : ಫೆ.8 ರಂದು ರಾಜ್ಯ ಮಟ್ಟದ ‘ಜನಸ್ಪಂದನಾ’ ಕಾರ್ಯಕ್ರಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಸಾರ್ವಜನಿಕರ ಗಮನಕ್ಕೆ : ಫೆ.8 ರಂದು ರಾಜ್ಯ ಮಟ್ಟದ ‘ಜನಸ್ಪಂದನಾ’ ಕಾರ್ಯಕ್ರಮ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಫೆಬ್ರವರಿ 8 ರಂದು ವಿಧಾನಸೌಧ ಆವರಣದಲ್ಲಿ ರಾಜ್ಯಮಟ್ಟದ ಜನಸ್ಪಂದನಾ ಕಾರ್ಯಕ್ರಮ ನಡೆಯಲಿದೆ.

ಜನಸ್ಪಂದನದ ಮೂಲಕ ಜನರ ಅಹವಾಲುಗಳಿಗೆ ಸ್ಥಳದಲ್ಲೇ ಅಥವಾ ಕಾಲಮಿತಿಯೊಳಗೆ ಪರಿಹಾರದ ಗ್ಯಾರಂಟಿ ಸಿಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಫೆಬ್ರವರಿ 08ರಂದು ವಿಧಾನಸೌಧದ ಮುಂಭಾಗದಲ್ಲಿ ರಾಜ್ಯ ಮಟ್ಟದ ಎರಡನೇ ಜನಸ್ಪಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಫೆಬ್ರವರಿ 8ರಂದು ವಿಧಾನಸೌಧದ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ನಡೆಸಲಿದ್ದು, ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಸ್ಥಳದಲ್ಲಿಯೇ ಪರಿಹಾರ ಸೂಚಿಸಲಿದ್ದಾರೆ. ಈ ಸಂದರ್ಭದಲ್ಲಿ ಎಲ್ಲ ಇಲಾಖೆಗಳ ಮುಖ್ಯಸ್ಥರು ಮತ್ತು ಕಾರ್ಯದರ್ಶಿಗಳು ಕಡ್ಡಾಯವಾಗಿ ಹಾಜರಿರಲು ಸೂಚಿಸಲಾಗಿದೆ. ತಮ್ಮ ಅಹವಾಲುಗಳೊಂದಿಗೆ ಬರುವ ಜನರಿಗೆ ವಿಶೇಷ ವ್ಯವಸ್ಥೆ ಮಾಡಲಾಗುತ್ತಿದೆ. ಮೆಜೆಸ್ಟಿಕ್ ಬಸ್ ನಿಲ್ದಾಣ ಮತ್ತು ರೈಲು ನಿಲ್ದಾಣಕ್ಕೆ ಉಚಿತ ಬಸ್ ಪ್ರಯಾಣದ ಸೌಲಭ್ಯ ಇರಲಿದೆ. ಕುಡಿಯುವ ನೀರು ಪೂರೈಕೆ, ಲಘು ಉಪಾಹಾರ ಮತ್ತು ಊಟದ ವ್ಯವಸ್ಥೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ವಿವಿಧ ಇಲಾಖೆಗಳ ಅರ್ಜಿ ಸ್ವೀಕಾರಕ್ಕೆ ಪ್ರತ್ಯೇಕ ಕೌಂಟರ್ಗಳನ್ನು ಮಾಡಲಾಗಿದೆ. ನಿಮ್ಮ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಜನಪರ ಸರ್ಕಾರ ಎಲ್ಲಾ ರೀತಿಯಲ್ಲೂ ಸಿದ್ಧವಾಗಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...