alex Certify ಪಡಿತರ ಚೀಟಿದಾರರಿಗೆ ಮುಖ್ಯ ಮಾಹಿತಿ: ಗರೀಬ್ ಕಲ್ಯಾಣ್ ಯೋಜನೆಗೆ ಹೆಚ್ಚುವರಿ ಅಕ್ಕಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಡಿತರ ಚೀಟಿದಾರರಿಗೆ ಮುಖ್ಯ ಮಾಹಿತಿ: ಗರೀಬ್ ಕಲ್ಯಾಣ್ ಯೋಜನೆಗೆ ಹೆಚ್ಚುವರಿ ಅಕ್ಕಿ

ನವದೆಹಲಿ: ಪಿಎಂಜಿಕೆಎವೈ ಅಡಿಯಲ್ಲಿ ಸರ್ಕಾರ ಗೋಧಿಯ ಬದಲಿಗೆ ಹೆಚ್ಚುವರಿ 55 ಲಕ್ಷ ಟನ್ ಅಕ್ಕಿಯನ್ನು ಮಂಜೂರು ಮಾಡಲಿದೆ. ಮುಂದಿನ ವರ್ಷದಿಂದ ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿಯಲ್ಲಿ ಸಾರವರ್ಧಿತ ಅಕ್ಕಿಯ ವಿತರಣೆಯನ್ನು ಹೆಚ್ಚಿಸುವ ಪ್ರಯತ್ನಗಳ ಮಧ್ಯೆ ರಾಜ್ಯಗಳ ಬೇಡಿಕೆಯ ಮೇರೆಗೆ ಉಚಿತ ಪಡಿತರ ಯೋಜನೆ PMGKAY ಅಡಿಯಲ್ಲಿ ಗೋಧಿಯ ಬದಲಿಗೆ ಹೆಚ್ಚುವರಿ 55 ಲಕ್ಷ ಟನ್ ಅಕ್ಕಿಯನ್ನು ನಿಗದಿಪಡಿಸಲಾಗಿದೆ ಎಂದು ಕೇಂದ್ರ ಹೇಳಿದೆ.

ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಆಹಾರ ಕಾರ್ಯದರ್ಶಿ ಸುಧಾಂಶು ಪಾಂಡೆ, ಉತ್ಪಾದನೆಯಲ್ಲಿ ನಿರೀಕ್ಷಿತ ಕುಸಿತ ಮತ್ತು ರಫ್ತು ಹೆಚ್ಚಳದ ನಂತರ ಸರ್ಕಾರದ ಗೋಧಿ ಸಂಗ್ರಹಣೆಯಲ್ಲಿನ ಕುಸಿತದ ಕಾರಣದಿಂದ ಈ ಕ್ರಮ ಕೈಗೊಂಡಿಲ್ಲ ಎಂದು ಸ್ಪಷ್ಟಪಡಿಸಿದರು.

ಪಂಜಾಬ್, ಹರಿಯಾಣ ಮತ್ತು ರಾಜಸ್ಥಾನದಂತಹ ಗೋಧಿ ಸೇವಿಸುವ ರಾಜ್ಯಗಳು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ(PMGKAY) ಅಡಿಯಲ್ಲಿ ಗೋಧಿಯನ್ನು ಪಡೆಯುವುದನ್ನು ಮುಂದುವರಿಸುತ್ತವೆ ಎಂದು ತಿಳಿಸಿದ್ದಾರೆ.

ಪಿಎಂಜಿಕೆಎವೈ ಅಡಿಯಲ್ಲಿ ಗೋಧಿಯ ಬದಲಿಗೆ ಹೆಚ್ಚುವರಿ ಅಕ್ಕಿ ನೀಡುವ ನಿರ್ಧಾರವನ್ನು ಎಲ್ಲಾ ರಾಜ್ಯಗಳೊಂದಿಗೆ ಸೂಕ್ತ ಸಮಾಲೋಚನೆಯ ನಂತರ ತೆಗೆದುಕೊಳ್ಳಲಾಗಿದೆ. ಹೆಚ್ಚುವರಿ ಸಬ್ಸಿಡಿ ಹೊರೆ ಸುಮಾರು 4,800 ಕೋಟಿ ಆಗಲಿದೆ ಎಂದು ಅವರು ಹೇಳಿದ್ದಾರೆ.

ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆ(NFSA) ಅಡಿಯಲ್ಲಿ, ಸಾರ್ವಜನಿಕ ವಿತರಣಾ ವ್ಯವಸ್ಥೆ(PDS) ಎಂದು ಕರೆಯಲ್ಪಡುವ ಪಡಿತರ ಅಂಗಡಿಗಳ ಮೂಲಕ ಕೇಂದ್ರದಿಂದ 80 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ಆಹಾರಧಾನ್ಯಗಳನ್ನು ಸಬ್ಸಿಡಿ ದರದಲ್ಲಿ ನೀಡಲಾಗುತ್ತದೆ.

ಮಾರ್ಚ್ 2020 ರಲ್ಲಿ ಕರೋನವೈರಸ್ ಸಾಂಕ್ರಾಮಿಕ ಸಮಯದಲ್ಲಿ ಜನರ ಕಷ್ಟಗಳನ್ನು ಕಡಿಮೆ ಮಾಡಲು ಆದರೆ PMGKAY ಅಡಿಯಲ್ಲಿ ಸುಮಾರು 5 ಕೆಜಿ ಧಾನ್ಯಗಳನ್ನು ಫಲಾನುಭವಿಗಳಿಗೆ ಉಚಿತವಾಗಿ ವಿತರಿಸಲಾಗುತ್ತದೆ. PMGKAY ಸೆಪ್ಟೆಂಬರ್ 2022 ರವರೆಗೆ ವಿಸ್ತರಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...