alex Certify ಕೈಮೀರಿದ ಕೊರೋನಾ ತಡೆಗೆ ಸರ್ಕಾರದಿಂದ ಮಹತ್ವದ ನಿರ್ಧಾರ: ಮದುವೆಗೆ 100, ಅಂತ್ಯಸಂಸ್ಕಾರಕ್ಕೆ 25 ಜನ -ಹೊಸದಾಗಿ ಗೈಡ್ ಲೈನ್ಸ್ ಬಿಡುಗಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೈಮೀರಿದ ಕೊರೋನಾ ತಡೆಗೆ ಸರ್ಕಾರದಿಂದ ಮಹತ್ವದ ನಿರ್ಧಾರ: ಮದುವೆಗೆ 100, ಅಂತ್ಯಸಂಸ್ಕಾರಕ್ಕೆ 25 ಜನ -ಹೊಸದಾಗಿ ಗೈಡ್ ಲೈನ್ಸ್ ಬಿಡುಗಡೆ

ಬೆಂಗಳೂರು: ರಾಜ್ಯ ಸರ್ಕಾರದಿಂದ ಕೊರೋನಾ ತಡೆಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ತೆರೆದ ಪ್ರದೇಶದಲ್ಲಿ ಮದುವೆ ಕಾರ್ಯಕ್ರಮಕ್ಕೆ 200 ಜನರಿಗೆ ಅವಕಾಶ ನೀಡಲಾಗಿದ್ದು, ಕಲ್ಯಾಣ ಮಂಟಪ ಮತ್ತು ಹಾಲ್ ಗಳಲ್ಲಿ 100 ಜನರಿಗೆ ಮಾತ್ರ ಅವಕಾಶ ಇರುತ್ತದೆ.

ಹುಟ್ಟುಹಬ್ಬ ಇತರ ಕಾರ್ಯಕ್ರಮಗಳಲ್ಲಿ 50 ಜನ ಸೇರಲು ಅವಕಾಶ ನೀಡಲಾಗಿದೆ. ಅಂತ್ಯಸಂಸ್ಕಾರಕ್ಕೆ 25 ಜನರು ಮಾತ್ರ ಸೇರಬಹುದು ಎಂದು ಹೇಳಲಾಗಿದೆ.

ರಾಜ್ಯ ಸರ್ಕಾರದಿಂದ ಹೊಸದಾಗಿ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದ್ದು, ತೆರೆದ ಪ್ರದೇಶದಲ್ಲಿ ಬರ್ತಡೇ ಕಾರ್ಯಕ್ರಮಗಳಿಗೆ 50 ಜನ, ಹಾಲ್ ಮತ್ತು ಸಭಾಂಗಣದಲ್ಲಿ 25 ಜನ ಮಾತ್ರ ಭಾಗಿಯಾಗಬೇಕು. ಧಾರ್ಮಿಕ ಆಚರಣೆ, ಧಾರ್ಮಿಕ ಸಮಾರಂಭಗಳಿಗೆ ನಿಷೇಧ ಹೇರಲಾಗಿದೆ. ನಿಯಮ ಉಲ್ಲಂಘಿಸಿದರೆ ಎನ್.ಡಿ.ಎಂ.ಎ. ಅಡಿ ಕ್ರಮ ಕೈಗೊಳ್ಳಲಾಗುವುದು ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...