alex Certify ಜೈಲು ಸೇರಿದ ಮುರುಘಾ ಸ್ವಾಮೀಜಿಗೆ ಬಿಗ್ ಶಾಕ್: ಸರ್ಕಾರದ ವಶಕ್ಕೆ ಮುರುಘಾ ಮಠ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜೈಲು ಸೇರಿದ ಮುರುಘಾ ಸ್ವಾಮೀಜಿಗೆ ಬಿಗ್ ಶಾಕ್: ಸರ್ಕಾರದ ವಶಕ್ಕೆ ಮುರುಘಾ ಮಠ…?

ಚಿತ್ರದುರ್ಗ: ಚಿತ್ರದುರ್ಗ ಮುರುಘಾ ಮಠದ ಮುರುಘಾ ಶರಣರು ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ್ದು, ಮಠಕ್ಕೆ ಆಡಳಿತಾಧಿಕಾರಿ ನೇಮಕ ಸನ್ನಿಹಿತವಾಗಿದೆ.

ಸರ್ಕಾರ ಮಾಹಿತಿ ಕೇಳಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. 70 ಪುಟಗಳ ವರದಿಯನ್ನು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಸರ್ಕಾರಕ್ಕೆ ಕಳುಹಿಸಿಕೊಟ್ಟಿದ್ದಾರೆ.

ಮುರುಘಾ ಮಠದಲ್ಲಿ ನಡೆದ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಸರ್ಕಾರ ಮಧ್ಯಪ್ರವೇಶಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಸಮಾಜದ ಮುಖಂಡರು ಹಾಗೂ ಭಕ್ತರು ಸರ್ಕಾರಕ್ಕೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸರ್ಕಾರ ಶೀಘ್ರ ವರದಿ ನೀಡಲು ಜಿಲ್ಲಾಧಿಕಾರಿಗೆ ಸೂಚನೆ ನೀಡಿತ್ತು.

ಜಿಲ್ಲಾಧಿಕಾರಿಗಳು ಕಂದಾಯ ಇಲಾಖೆ ಕಾರ್ಯದರ್ಶಿಗೆ ವರದಿ ಸಲ್ಲಿಸಿದ್ದಾರೆ. ವರದಿಯನ್ನು ಗೌಪ್ಯವಾಗಿ ಇಡಲಾಗಿದೆ. ಮಠಕ್ಕೆ ಆಡಳಿತಾಧಿಕಾರಿ ನೇಮಕ ಸನ್ನಿಹಿತವಾಗಿದೆ ಎಂದು ಹೇಳಲಾಗಿದೆ.

ಈ ನಡುವೆ ಮುರುಘಾ ಮಠದ ಉಸ್ತುವಾರಿ ಬಸವಪ್ರಭು ಸ್ವಾಮೀಜಿ, ಜಿಲ್ಲಾಧಿಕಾರಿಗಳು ಕೇಳಿದ ಮಾಹಿತಿ ನೀಡಿದ್ದೇವೆ. ಮುರುಘಾ ಶ್ರೀಗಳು ನಮಗೆ ಜಿಪಿಎ ನೀಡಿದ್ದಾರೆ. ಎಸ್.ಜೆ.ಎಂ. ವಿದ್ಯಾಪೀಠದ ಕಾರ್ಯದರ್ಶಿಯಾಗಿ ವಸ್ತ್ರದಮಠ ಅವರಿಗೂ ಜಿಪಿಎ ನೀಡಲಾಗಿದ್ದು, ಮಠ ಮತ್ತು ವಿದ್ಯಾಪೀಠದ ಆಡಳಿತ ಸುಗಮವಾಗಿ ನಡೆಯುತ್ತಿದೆ. ಸರ್ಕಾರದಿಂದ ಆಡಳಿತಾಧಿಕಾರಿ ನೇಮಕ ಅನಗತ್ಯವಾಗಿದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...