alex Certify ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರ ಹತ್ಯೆ; ಆಘಾತಕಾರಿ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರ ಹತ್ಯೆ; ಆಘಾತಕಾರಿ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿರುವ ಹತ್ಯಾ ಪ್ರಕರಣವೊಂದು ಬೆಚ್ಚಿ ಬೀಳಿಸುವಂತಿದೆ. ಮೂರು ಮಹಿಳೆಯರು ಹಾಗೂ ಮೂವರು ಪುರುಷರಿದ್ದ ಗುಂಪು ವ್ಯಕ್ತಿ ಒಬ್ಬನ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ ಮಾಡಿದೆ. ಇದರ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಆಘಾತಗೊಳಿಸುವಂತಿದೆ.

ಡಿಸೆಂಬರ್ 4ರ ಮಧ್ಯರಾತ್ರಿ ಕೆಪಿ ಅಗ್ರಹಾರ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮೃತಪಟ್ಟವನನ್ನು 30 ವರ್ಷದ ಬಾಳಪ್ಪ ಎಂದು ಗುರುತಿಸಲಾಗಿದೆ. ಮಹಿಳೆ ಹಾಗೂ ಪುರುಷರಿದ್ದ ಈ ಗುಂಪು ಬಾಳಪ್ಪನನ್ನು ಎಳೆದುಕೊಂಡು ಬಂದು ರಸ್ತೆಯಲ್ಲಿ ಬೀಳಿಸಿದೆ.

ಬಳಿಕ ಎಲ್ಲರೂ ಸೇರಿ ಮನಬಂದಂತೆ ಆತನ ಮೇಲೆ ಹಲ್ಲೆ ನಡೆಸಿದ್ದಾರೆ. ನಂತರ ಮಹಿಳೆಯೊಬ್ಬಳು ಕಲ್ಲನ್ನು ಎತ್ತಿಕೊಂಡು ಬಂದು ಜೊತೆಯಲ್ಲಿದ್ದವನಿಗೆ ನೀಡಿದ್ದು ಆತ ಪದೇ ಪದೇ ಬಾಳಪ್ಪನ ತಲೆಯ ಮೇಲೆ ಹಾಕಿದ್ದಾನೆ. ಇದರ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಆತ ಮೃತಪಟ್ಟಿದ್ದು, ಕೊಲೆಗೆ ಕಾರಣವೇನೆಂಬುದು ತಿಳಿದು ಬಂದಿಲ್ಲ. ಅಲ್ಲದೆ ಕೊಲೆಗಾರರ ಗುರುತು ಸಹ ಪತ್ತೆಯಾಗಿಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...