ಬೆಂಗಳೂರು : ಸ್ವಂತ ಮನೆ ಇರಲಿ, ಬಾಡಿಗೆ ಮನೆ ಇರಲಿ ಕರಾರು ಪತ್ರ ಬೇಕು ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ (KJ George) ಹೇಳಿದ್ದಾರೆ.
ಗೃಹಜ್ಯೋತಿ ವಿದ್ಯುತ್ ಯೋಜನೆ ಸೌಲಭ್ಯ ಪಡೆಯುವ ಕುರಿತು ಇಂಧನ ಸಚಿವ ಕೆ.ಜೆ. ಜಾರ್ಜ್ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದ್ದಾರೆ.
ಸ್ವಂತ ಮನೆ ಇರಲಿ, ಬಾಡಿಗೆ ಮನೆಯಲ್ಲಿ ಇರಲಿ, ಬಾಡಿಗೆ ಕರಾರು ಪತ್ರ ಬೇಕು. ಸೇವಾಸಿಂಧು ಪೋರ್ಟಲ್ (Sewasindhu Portal) ನಲ್ಲಿ ಗೃಹ ಜ್ಯೋತಿ ಅಂತ ಪ್ರತ್ಯಕ್ಷವಾಗಿ ಅರ್ಜಿ ಹಾಕಲು ಅವಕಾಶ ಇದೆ ಎಂದರು.
ಗೃಹಜ್ಯೋತಿಗೆ ಅರ್ಜಿ ಸಲ್ಲಿಸಲು ಪ್ರತ್ಯೇಕ ಆ್ಯಪ್ (App) ಬಿಡುಗಡೆ ಮಾಡುತ್ತೇವೆ, ಜುಲೈ ತಿಂಗಳಿನ ಬಿಲ್ ಆಗಸ್ಟ್ ನಲ್ಲಿ ಪಾವತಿ ಮಾಡುವುದು ಬೇಡ ಎಂದರು. 2 ಕೋಟಿ 14 ಲಕ್ಷ ಗ್ರಾಹಕರಿಗೆ ಈ ಯೋಜನೆ ಲಾಭ ಸಿಗುತ್ತದೆ, 2 ತಿಂಗಳ ಸರಾಸರಿ ಆಧಾರದ ಮೇಲೆ 10% ಹೆಚ್ಚು ವಿದ್ಯುತ್ ಬಳಕೆ ಉಚಿತವಾಗಿರುತ್ತದೆ ಎಂದರು.